ADVERTISEMENT

ಸಸ್ಯಾಹಾರ, ಮಾಂಸಾಹಾರ ಅಡುಗೆಗೆ ಒಂದೇ ಚಮಚ ಬಳಕೆ!; ಸುಧಾ ಮೂರ್ತಿ ಆತಂಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜುಲೈ 2023, 10:48 IST
Last Updated 26 ಜುಲೈ 2023, 10:48 IST
ಸುಧಾ ಮೂರ್ತಿ
ಸುಧಾ ಮೂರ್ತಿ   

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಇದೀಗ ತಮ್ಮ ಆಹಾರ ಕ್ರಮದ ಬಗ್ಗೆ ಮಾತನಾಡಿದ್ದಾರೆ. ತಾವೊಬ್ಬ ಶುದ್ಧ ಸಸ್ಯಾಹಾರಿ ಎಂದು ಹೇಳಿಕೊಂಡಿರುವ ಅವರು, ಸಸ್ಯಾಹಾರ ಮತ್ತು ಮಾಂಸಾಹಾರ ಅಡುಗೆಗೆ ಒಂದೇ ಚಮಚ (ಸೌಟು) ಬಳಕೆ ಮಾಡುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ 'ಖಾನೆ ಮೇ ಕ್ಯಾ ಹೈ' ಯೂಟ್ಯೂಬ್‌ ಚಾನೆಲ್‌ನ 'ಖಾನೆ ಮೇ ಕೌನ್‌ ಹೇ' ಎಂಬ ಸಂಚಿಕೆಯಲ್ಲಿ ಸುಧಾ ಮೂರ್ತಿ ಕಾಣಿಸಿಕೊಂಡಿದ್ದರು. ಈ ವೇಳೆ ತಾವು ಪಾಲಿಸುವ ಆಹಾರ ಕ್ರಮದ ಬಗ್ಗೆ ಮಾತನಾಡಿದ್ದಾರೆ.

'ನಾನೊಬ್ಬಳು ಶುದ್ಧ ಸಸ್ಯಹಾರಿ. ಮೊಟ್ಟೆ ಸಹಿತ ಯಾವುದೇ ಮಾಂಸಾಹಾರ ಮತ್ತು ಬೆಳ್ಳುಳ್ಳಿಯನ್ನು ಸೇವಿಸುವುದಿಲ್ಲ. ಸಸ್ಯಾಹಾರ–ಮಾಂಸಾಹಾರ ಭಕ್ಷ್ಯಗಳಿಗೆ ಒಂದೇ ಚಮಚ ಬಳಸುತ್ತಾರೆಯೇ ಎಂಬ ಆತಂಕ ನನ್ನ ಮನಸ್ಸನ್ನು ತುಂಬಾ ಕಾಡುತ್ತದೆ' ಎಂದರು.

ADVERTISEMENT

'ನಾನು ವಿದೇಶಕ್ಕೆ ಹೋದರೂ ಅಲ್ಲಿ ಸಸ್ಯಾಹಾರಿ ರೆಸ್ಟೋರೆಂಟ್‌ಗಳನ್ನು ಹುಡುಕುತ್ತೇನೆ. ಮನೆ ಊಟವನ್ನು ಹೆಚ್ಚಾಗಿ ಇಷ್ಟಪಡುತ್ತೇನೆ. ಪ್ರಯಾಣ ಮಾಡುವಾಗ ಮನೆಯಲ್ಲೇ ತಯಾರಿಸಿದ ಆಹಾರವನ್ನು ಕೊಂಡೊಯ್ಯುತ್ತೇನೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.