ವಾರ ಭವಿಷ್ಯ | 2025ರ ಆಗಸ್ಟ್ 24–30: ಕೃಷಿಕರಿಗೆ ಅನಿರೀಕ್ಷಿತ ಆದಾಯ ಬರುತ್ತದೆ
ಎಂ.ಎನ್.ಲಕ್ಷ್ಮೀನರಸಿಂಹ ಸ್ವಾಮಿ
Published 23 ಆಗಸ್ಟ್ 2025, 23:30 IST
Last Updated 23 ಆಗಸ್ಟ್ 2025, 23:30 IST
ವಾರ ಭವಿಷ್ಯ
ಮೇಷ
ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಆದಾಯವು ನಿರೀಕ್ಷೆಯ ಹತ್ತಿರ ಬರುತ್ತದೆ. ನಿಮ್ಮ ಬಂಧುಗಳ ಸಹಕಾರ ನಿಮಗೆ ದೊರೆಯುವುದಿಲ್ಲ. ಭೂಮಿ ವ್ಯವಹಾರ ಮಾಡುವವರ ಆದಾಯ ಹೆಚ್ಚುತ್ತದೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲವಿದೆ. ಸಂಗಾತಿಯ ವಿಪರೀತ ಖರ್ಚುಗಳು ಗಾಬರಿ ಹುಟ್ಟಿಸುತ್ತವೆ. ಕೃಷಿಯಿಂದ ಅನಿರೀಕ್ಷಿತ ಆದಾಯ ಬರುತ್ತದೆ. ವೃತ್ತಿಯಲ್ಲಿ ಅಭಿವೃದ್ಧಿಯನ್ನು ಕಾಣಬಹುದು. ಕಬ್ಬಿಣದ ವ್ಯಾಪಾರಿಗಳಿಗೆ ಹೆಚ್ಚು ಆದಾಯವಿರುತ್ತದೆ.
ವೃಷಭ
ಗೌರವಯುತವಾದ ನಡವಳಿಕೆಯನ್ನು ಅಳವಡಿಸಿಕೊಳ್ಳುವಿರಿ. ಆದಾಯವು ನಿಮ್ಮ ನಿರೀಕ್ಷೆಯ ಹತ್ತಿರ ಬರುತ್ತದೆ. ಎಲ್ಲರ ಸಹಕಾರ ನಿಮಗೆ ದೊರೆಯುತ್ತದೆ. ಕೃಷಿಭೂಮಿಯನ್ನು ಕೊಳ್ಳಬಹುದು. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲವಿರುತ್ತದೆ. ಕೆಲವರಿಗೆ ಅನಿರೀಕ್ಷಿತ ಆದಾಯ ಲಭಿಸುತ್ತದೆ. ಹಿರಿಯರ ಆರೋಗ್ಯಕ್ಕಾಗಿ ಹಣ ಖರ್ಚಾಗುತ್ತದೆ. ವೃತ್ತಿಯಲ್ಲಿ ಅಭಿವೃದ್ಧಿಯನ್ನು ಕಾಣಬಹುದು.
ಮಿಥುನ
ಕೃಷಿಯಿಂದ ಆದಾಯವಿರುತ್ತದೆ. ನಿಮ್ಮ ಬಂಧುಗಳ ಸಹಕಾರ ನಿಮಗೆ ದೊರೆಯುತ್ತದೆ. ಪಶುಸಂಗೋಪನೆ ಮಾಡುವವರಿಗೆ ಲಾಭವಿದೆ. ವೃತ್ತಿಯಲ್ಲಿ ಸಂಪಾದನೆ ಹೆಚ್ಚಾಗುವ ಸಾಧ್ಯತೆ ಇದೆ. ಕೆಲವರಿಗೆ ಬಾಯಿ ಹುಣ್ಣು ಕಾಡಬಹುದು. ಶಾಲಾ ಕಾಲೇಜುಗಳನ್ನು ನಡೆಸುವವರಿಗೆ ಕಾನೂನಿನ ತೊಡಕುಗಳು ಎದುರಾಗಬಹುದು. ಕಬ್ಬಿಣದ ವ್ಯಾಪಾರಿಗಳಿಗೆ ಅನಿರೀಕ್ಷಿತ ಲಾಭ ಬರುತ್ತದೆ. ಕ್ರೀಡಾಪಟುಗಳಿಗೆ ಬೇಕಾದ ಸೌಲಭ್ಯ ದೊರೆಯುತ್ತವೆ.
ಕರ್ಕಾಟಕ
ಆದಾಯವು ಸಾಮಾನ್ಯಗತಿಯಲ್ಲಿರುತ್ತದೆ. ಮಹಿಳೆಯರಿಂದ ಕೆಲಸ ಕಾರ್ಯಗಳಿಗೆ ಅಡ್ಡಿಯಾಗಬಹುದು. ಆಸ್ತಿ ಖರೀದಿ ತಯಾರಿ ನಡೆಸಬಹುದು. ಕ್ರೀಡಾಪಟುಗಳಿಗೆ ನಮ್ಮ ಸಾಮರ್ಥ್ಯವನ್ನು ತೋರಿಸಲು ಉತ್ತಮ ಅವಕಾಶ ದೊರೆಯುತ್ತದೆ. ಹಣಕಾಸಿನ ವ್ಯವಹಾರಗಳಲ್ಲಿ ಅಷ್ಟು ಲಾಭವಿರುವುದಿಲ್ಲ. ಸಂಗಾತಿಯು ಸಂಪಾದನೆಯಲ್ಲಿ ಹೆಚ್ಚು ಭಾಗವನ್ನು ಸಂಸಾರಕ್ಕೆ ಬಳಸುವವರು. ವೃತ್ತಿಯಲ್ಲಿ ಹಿತ ಶತ್ರುಗಳನ್ನು ಕಾಣಬಹುದು
ಸಿಂಹ
ಅಧಿಕ ಒತ್ತಡದ ನಡುವೆ ಕೆಲಸ ಮಾಡುವಿರಿ. ಆದಾಯವು ಸಾಮಾನ್ಯ ಗತಿಯಲ್ಲಿರು ತ್ತದೆ. ಭೂಮಿ ಸಂಬಂಧಿತ ವ್ಯವಹಾರಗಳಲ್ಲಿ ಅಷ್ಟು ಲಾಭವಿರುವುದಿಲ್ಲ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಪಡೆಯುವ ಯೋಗವಿದೆ. ರಾಜಕೀಯ ನಾಯಕರುಗಳಿಗೆ ಕಳೆದುಹೋಗಿದ್ದ ಜನ ಬೆಂಬಲ ಪುನಃ ದೊರೆಯುತ್ತದೆ. ವಿದೇಶಿ ವ್ಯವಹಾರ ಮಾಡುವವರಿಗೆ ಅಭಿವೃದ್ಧಿ ಕಡಿಮೆ. ಆರೋಗ್ಯಕ್ಕಾಗಿ ಹೆಚ್ಚು ಹಣ ಖರ್ಚಾಗುತ್ತದೆ.
ಕನ್ಯಾ
ಮನಸ್ಸಿನಲ್ಲಿ ಸ್ಥಿರ ಭಾವನೆಗಳಿರುವುದಿಲ್ಲ. ಆದಾಯವು ಮಧ್ಯಮಗತಿಯಲ್ಲಿರುತ್ತದೆ. ಕೃಷಿಯಿಂದ ಸಾಕಷ್ಟು ಲಾಭವನ್ನು ಪಡೆಯಬಹುದು. ಪುಸ್ತಕ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರವಾಗುತ್ತದೆ. ಮಕ್ಕಳ ಬಗ್ಗೆ ಶುಭವಾರ್ತೆಗಳನ್ನು ಕೇಳಬಹುದು. ಸಂಗಾತಿಯ ಆದಾಯದಲ್ಲಿ ಹೆಚ್ಚಳವನ್ನು ಕಾಣಬಹುದು. ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭವಿರುತ್ತದೆ. ವೃತ್ತಿಯಲ್ಲಿ ಏಳಿಗೆಯನ್ನು ಕಾಣಬಹುದು. ಸಾವಯವ ಕೃಷಿ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ.
ತುಲಾ
ಸರಿಯಾದ ನಿರ್ಧಾರಗಳಿಲ್ಲದೆ ಮನಸ್ಸು ಗೊಂದಲದ ಗೂಡಾಗುತ್ತದೆ. ಆದಾಯವು ಮಧ್ಯಮಗತಿಯಲ್ಲಿರುತ್ತದೆ. ನಿಮ್ಮ ಕೆಲವು ಕೆಲಸಗಳಿಗೆ ಹಿರಿಯರಿಂದ ವಿರೋಧ ಬರಬಹುದು. ವಿದ್ಯಾರ್ಥಿಗಳಿಗೆ ಹೆಚ್ಚಿನ ಫಲಿತಾಂಶ ಪಡೆಯುವುದು ಕಷ್ಟವಾಗಬಹುದು. ಹಳೆಯ ಕೀಲು ನೋವುಗಳು ಕೆಲವರನ್ನು ಕಾಡಬಹುದು. ಪಾಲುದಾರಿಕೆ ವ್ಯವಹಾರಗಳಲ್ಲಿ ನಿಮಗೆ ಲಾಭವಿರುತ್ತದೆ. ವೃತ್ತಿಯಲ್ಲಿದ್ದ ಕೆಲವು ಗೊಂದಲಗಳು ಪರಿಹಾರವಾಗುತ್ತವೆ.
ವೃಶ್ಚಿಕ
ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲೇ ಬೇಕಾದ ಪರಿಸ್ಥಿತಿ ಇರುತ್ತದೆ. ಆದಾಯವು ಮಧ್ಯಮಗತಿಯಲ್ಲಿರುತ್ತದೆ. ನಿಮ್ಮ ಕೆಲಸ ಕಾರ್ಯಗಳಿಗೆ ಜನ ಬೆಂಬಲ ದೊರೆಯುತ್ತದೆ. ಕೃಷಿ ಸಂಶೋಧನಾಕಾರರಿಗೆ ಸಾಕಷ್ಟು ಪ್ರಗತಿ ಇರುತ್ತದೆ. ವಿದ್ಯಾರ್ಥಿಗಳು ಶ್ರಮಪಟ್ಟು ಉತ್ತಮ ಫಲಿತಾಂಶ ಪಡೆಯಬಹುದು. ಬೆಂಕಿಯ ಜೊತೆ ಕೆಲಸ ಮಾಡುವವರು ಹೆಚ್ಚು ಎಚ್ಚರದಿಂದ ಕೆಲಸ ಮಾಡಿ. ಕೃಷಿಯಿಂದ ಸಾಕಷ್ಟು ಲಾಭವನ್ನು ನಿರೀಕ್ಷೆ ಮಾಡಬಹುದು.
ಧನು
ನಿಮ್ಮ ಶತ್ರುಗಳಿಗೂ ಕೂಡ ಸಹಾಯ ಮಾಡುವಿರಿ. ಆದಾಯವು ಕಡಿಮೆ ಇದ್ದು, ಅದರಲ್ಲೇ ನಿರ್ವಹಣೆ ಮಾಡುವಿರಿ. ವಿದೇಶದಲ್ಲಿರುವವರು ಅಲ್ಲಿಯೇ ಸ್ಥಿರಾಸ್ತಿ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಸಾಕಷ್ಟು ಪರಿಶ್ರಮ ಹಾಕಿ ಉತ್ತಮ ಫಲಿತಾಂಶ ಪಡೆಯಬಹುದು. ಬಡ್ಡಿ ವ್ಯವಹಾರಗಳು ಅಷ್ಟು ಒಳಿತಲ್ಲ. ಕೃಷಿಯಿಂದ ನಿರೀಕ್ಷಿತ ಆದಾಯ ಇರುವುದಿಲ್ಲ. ಹಿರಿಯರ ಆರೋಗ್ಯಕ್ಕಾಗಿ ಹಣ ಖರ್ಚಾಗುತ್ತದೆ. ವೃತ್ತಿಯಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು.
ಮಕರ
ನಿಮ್ಮ ಪರಿಶ್ರಮದಿಂದ ವೃತ್ತಿಯಲ್ಲಿ ಒಳ್ಳೆಯ ಹೆಸರನ್ನು ಪಡೆಯುವಿರಿ. ಆದಾಯವು ಕಡಿಮೆ ಇರುತ್ತದೆ. ಕಟ್ಟಡ ನಿರ್ಮಾಣಕಾರರಿಗೆ ಉತ್ತಮ ಕೆಲಸ ದೊರೆತು ಆದಾಯ ಹೆಚ್ಚುತ್ತದೆ. ವಿದ್ಯಾರ್ಥಿಗಳಿಗೆ ಅತಿ ಹೆಚ್ಚು ಫಲಿತಾಂಶ ಪಡೆಯುವ ಯೋಗವಿದೆ. ಸ್ವಂತ ಆರೋಗ್ಯದ ಕಡೆ ಗಮನವಿರಲಿ. ಸರ್ಕಾರಿ ಕೆಲಸ ಕಾರ್ಯಗಳಲ್ಲಿ ನಿಧಾನ ಗತಿ ಇರುತ್ತದೆ. ಹಿರಿಯರ ಮಾರ್ಗದರ್ಶನದಿಂದ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಬಹುದು.
ಕುಂಭ
ಸಮಾಜಮುಖಿಯಾಗಿ ಕೆಲಸ ಮಾಡುವಿರಿ. ಆದಾಯವು ನಿರೀಕ್ಷೆಯಷ್ಟಿರುತ್ತದೆ. ಸಂಬಂಧಿಕರಿಗೆ ಕೊಟ್ಟ ಸಾಲ ಮರಳಿ ಬರುವುದಿಲ್ಲ. ಸ್ಥಿರಾಸ್ತಿಯನ್ನು ಕೊಳ್ಳುವ ಯೋಚನೆ ಮಾಡಬಹುದು. ಹೊಸ ವ್ಯವಹಾರಗಳಲ್ಲಿ ನಿಮಗೆ ಅವಕಾಶ ದೊರೆಯುತ್ತದೆ. ಹರಿತವಾದ ಆಯುಧಗಳ ಜೊತೆ ಕೆಲಸ ಮಾಡುವವರು ಎಚ್ಚರದಿಂದ ಮಾಡಿರಿ. ಸಂಗಾತಿಯ ಸಹಾಯದಿಂದ ಸರ್ಕಾರಿ ಅನುದಾನಗಳು ಸುಲಭವಾಗಿ ದೊರೆಯುತ್ತವೆ. ವೃತ್ತಿಯಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯುತ್ತದೆ.
ಮೀನ
ಅತಿಯಾದ ಆತ್ಮವಿಶ್ವಾಸ ನಿಮ್ಮಲ್ಲಿ ಇರುತ್ತದೆ. ಆದಾಯವು ಮಧ್ಯಮಗತಿಯಲ್ಲಿರುತ್ತದೆ. ಧರ್ಮದ ಕಡೆಗೆ ಮನಸ್ಸು ಹೆಚ್ಚು ವಾಲುತ್ತದೆ. ಬಯಸಿದ ಒಡವೆ, ವಸ್ತುಗಳನ್ನು ಕೊಳ್ಳಬಹುದು. ಮಕ್ಕಳಿಂದ ಸೂಕ್ತ ಗೌರವ ದೊರೆಯುವುದಿಲ್ಲ. ಹಿರಿಯರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯನ್ನು ಕಾಣಬಹುದು. ಆಭರಣ ತಯಾರಕರಿಗೆ ಹಿನ್ನಡೆ ಇರುತ್ತದೆ. ಕೃಷಿಯಿಂದ ಹೆಚ್ಚು ಆದಾಯವನ್ನು ನಿರೀಕ್ಷೆ ಮಾಡಬಹುದು. ವೃತ್ತಿಯಲ್ಲಿ ಹಿರಿಯ ಅಧಿಕಾರಿಗಳನ್ನು ಓಲೈಕೆ ಮಾಡಬೇಕಾಗಬಹುದು.