ಪಂಚಾಮೃತ ಸುಗಮ ಸಂಗೀತ ಅಕಾಡೆಮಿಯು ದೊಡ್ಡಬೊಮ್ಮಸಂದ್ರದಲ್ಲಿ ಇತ್ತೀಚೆಗೆ `ಇಂಚರ-23' ವಾದ್ಯ ಸಂಗೀತ ಕಾರ್ಯಕ್ರಮ ಆಯೋಜಿಸಿತ್ತು.
ಪ್ರಣವ್ದತ್ ಅವರು ರಿದಂಪ್ಯಾಡ್ ನುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೊದಲಿಗೆ `ವಾತಾಪಿ ಗಣಪತಿಂ ಭಜೆ' ಭಕ್ತಿ ಗೀತೆಯನ್ನು ಆಯ್ದುಕೊಂಡರು. `ಭಾಗ್ಯದಾ ಲಕ್ಷ್ಮೀ ಬಾರಮ್ಮ' ಗೀತೆಯೊಂದಿಗೆ ಮುಕ್ತಾಯ ಮಾಡಿದರು. ಅಭಿಜಿತ್ (ಹಾರ್ಮೋನಿಯಂ), ಗುರುನಂದನರಾವ್ (ತಬಲಾ) ವಾದ್ಯ ಸಹಕಾರ ನಿಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ಉದ್ಯೋಗಿ ಬಿ.ಎಸ್. ವಿಜಯಕುಮಾರ್ ಅವರು `ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸುವಲ್ಲಿ ಪೋಷಕರ ಪಾತ್ರ ಹಾಗೂ ಸಹಕಾರ ಅಗತ್ಯ'ಎಂದು ಅಭಿಪ್ರಾಯಪಟ್ಟರು.
ವಿಶೇಷ ಲಯವಾದ್ಯಗಾರ ರವಿ, ಪ್ರತಿಮಾ ರವಿ, ಕವಿ ವಿ.ಮಲ್ಲಿಕಾರ್ಜುನಯ್ಯ, ಸಂಸ್ಥೆ ಸಂಸ್ಥಾಪಕಿ ಗಾಯತ್ರಿ ಕೇಶವ್ ಮತ್ತಿತರರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.