ADVERTISEMENT

ಉಚಿತ ಚಿಕಿತ್ಸಾ ಶಿಬಿರ

​ಪ್ರಜಾವಾಣಿ ವಾರ್ತೆ
Published 17 ಜನವರಿ 2012, 19:30 IST
Last Updated 17 ಜನವರಿ 2012, 19:30 IST

ಉದಯಭಾನು ಕಲಾಸಂಘದ ಸಭಾಂಗಣದಲ್ಲಿ ಇದೇ 22ರಂದು ಬೆಳಿಗ್ಗೆ 10ಕ್ಕೆ ಉಚಿತ ಕಣ್ಣು ಪರೀಕ್ಷೆ, ಪೊರೆ ಶಸ್ತ್ರ ಚಿಕಿತ್ಸೆ ಹಾಗೂ ದಂತ ಪರೀಕ್ಷಾ ಶಿಬಿರ ನಡೆಯಲಿದೆ.

ಡಾ.ಎಲ್.ಬಿಂದು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಿಬಿರವನ್ನು ಉದಯಭಾನು ಕಲಾಸಂಘವು ರಾಜಾಜಿನಗರದ ನಾರಾಯಣ ನೇತ್ರಾಲಯದ ಸಹಕಾರದಿಂದ ಪ್ರತಿ ತಿಂಗಳ 2 ಮತ್ತು 4ನೆಯ ಭಾನುವಾರ ನಿರಂತರವಾಗಿ ನಡೆಸುತ್ತಿದ್ದು, ಇದು 44ನೇ ಶಿಬಿರವಾಗಿದೆ.

ಆಸಕ್ತರು ಮುಂಚಿತವಾಗಿಯೇ ಸಂಘದ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾಹಿತಿಗಾಗಿ ಸಂಪರ್ಕಿಸಿ: ಉದಯಭಾನು ಕಲಾಸಂಘ, ಗವಿಪುರ ಸಾಲು ಛತ್ರಗಳ ಎದುರು, ರಾಮಕೃಷ್ಣ ಮಠ ಬಡಾವಣೆ, ಕೆಂಪೇಗೌಡನಗರ, ದೂ: 26601831

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.