ವಿಶ್ವಚೇತನದ ಬುದ್ಧ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್: ಸರ್ವಧರ್ಮ ಸಾಮೂಹಿಕ ವಿವಾಹ ಮಂಟಪ, ಹೆಗ್ಗನಹಳ್ಳಿ ಬಸ್ ನಿಲ್ದಾಣದ ಹಿಂಭಾಗದ ಮೈದಾನ, ಪೀಣ್ಯ 2ನೇ ಹಂತ ಮುಖ್ಯ ರಸ್ತೆ ಇಲ್ಲಿ ಜನವರಿ 18 ಶುಕ್ರವಾರದಂದು ಬೆಳಿಗ್ಗೆ 9.30ಕ್ಕೆ ಉಚಿತವಾಗಿ ಸರ್ವಧರ್ಮ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ. ಹಿಂದೂ ವಿವಾಹ ಕಾಯ್ದೆಯಡಿ ಯಾವುದೇ ಜಾತಿ, ಮತ, ಧರ್ಮ, ಬೇಧವಿಲ್ಲದೆ ಸರಳವಾಗಿ ನಡೆಸಲಾಗುವುದು. ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹಿತ ಜೋಡಿಗಳನ್ನು ಕಡ್ಡಾಯವಾಗಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಿಸಲಾಗುವುದು. ಈ ವಿವಾಹಕ್ಕೆ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಡಿ.25 ಕೊನೆಯ ದಿನಾಂಕವಾಗಿರುತ್ತದೆ.
ಮಾಹಿತಿಗೆ- 97406 15325/ 94833 30325.