ADVERTISEMENT

ರೋಮಾಂಚನಕಾರಿ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 2 ಜನವರಿ 2012, 19:30 IST
Last Updated 2 ಜನವರಿ 2012, 19:30 IST

ಜನಸೇವಾ ವಿದ್ಯಾಕೇಂದ್ರದ ವಾರ್ಷಿಕೋತ್ಸವ ಸಮಾರಂಭ ಈಚೆಗೆ ಅದ್ದೂರಿಯಾಗಿ ನಡೆಯಿತು.

ಮಕ್ಕಳು ನೀಡಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸ್ಸಿಗೆ ಮುದನೀಡಿದರೆ, ಮಲ್ಲಕಂಬ, ಹಗ್ಗದ ಮಲ್ಲಕಂಬ ಪ್ರದರ್ಶನ, ತಂತಿ ಮೇಲಿನ ನಡಿಗೆ, ಫೈರ್ ಜಂಪ್ ರೋಮಾಂಚನ ಹುಟ್ಟಿಸಿತು. ಈ ಸಂದರ್ಭದಲ್ಲಿ ವಾರ್ಷಿಕ ಸಂಚಿಕೆ ವಿದ್ಯಾಶ್ರೀ ಬಿಡುಗಡೆ ಮಾಡಲಾಯಿತು.

ಕ್ರೀಡಾಕೂಟ ಹಾಗೂ ಮತ್ತಿತರ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಸೂರ್ಯ ರೋಶನಿ ಲಿಮಿಟೆಡ್ ಅಧ್ಯಕ್ಷ ಜಯಪ್ರಕಾಶ್ ಅಗರವಾಲ್ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಎಂ.ದೇವಪ್ರಕಾಶ್, ಕೆ.ವಿ.ರಮೇಶ್, ಟಿ.ಎಸ್.ಸತೀಶ್, ಎಂ.ಶಶಿಧರ್ ಅತಿಥಿಗಳಾಗಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.