ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ತೀರ್ಪುಗಾರರಾಗಿರುವ, ಸಂಗೀತ ನಿರ್ದೇಶಕ ಹಂಸಲೇಖ ಅವರು ‘ಮಹಾಗುರು’ವಾಗಿರುವ ‘ಸರಿಗಮಪ ಸೀಸನ್ 14’ರ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಇದೇ ಶನಿವಾರ (ಮೇ 26) ಸಂಜೆ 6ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ನೇರ ಪ್ರಸಾರ ಆಗಲಿದೆ.
‘ಸರಿಗಮಪ ಸೀಸನ್ 14’ ಕನ್ನಡ ಕಿರುತೆರೆ ರಿಯಾಲಿಟಿ ಶೋ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ಸು ಕಂಡಿದೆ ಎಂದು ಜೀ ಕನ್ನಡ ವಾಹಿನಿ ಹೇಳಿಕೊಂಡಿದೆ. ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಐದು ಜನ ಸೆಣೆಸಲಿದ್ದಾರೆ. ಉಡುಪಿಯ ಅಭಿಜಾತ್ ಭಟ್, ಇಟಗಿಯ ವಿಶ್ವಪ್ರಸಾದ್, ಬಳ್ಳಾರಿಯ ಜ್ಞಾನೇಶ್, ಬೆಂಗಳೂರಿನ ಕೀರ್ತನ, ಹಾಗೂ ಕ್ವಾರ್ಟರ್ ಫೈನಲ್ ಹಂತದಿಂದ ನೇರವಾಗಿ ಫಿನಾಲೆ ತಲುಪಿರುವ ಚನ್ನಗಿರಿಯ ತೇಜಸ್ ಶಾಸ್ತ್ರಿ ಅಂತಿಮ ಸುತ್ತಿನಲ್ಲಿ ಇದ್ದಾರೆ.
ಇವರೆಲ್ಲ ಜೊತೆ, ಬೇಲೂರಿನ ನೇಹಾ ‘ಮೈಲ್ಡ್ ಪರ್ಫಾರ್ಮರ್’ ಆಗಿ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪುಟಾಣಿ ಗಾಯಕರ ಈ ಕಾರ್ಯಕ್ರಮ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನ ವೈಟ್ ಆರ್ಕಿಡ್ಸ್ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಖುದ್ದಾಗಿ ವೀಕ್ಷಿಸಲು ಇಚ್ಛಿಸುವವರಿಗೆ ಪಾಸ್ಗಳು ಜೀ ಕನ್ನಡ ವಾಹಿನಿಯ ಕಚೇರಿಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ದೊರೆಯಲಿವೆ. ಮೊದಲು ಬಂದವರಿಗೆ ಆದ್ಯತೆ. ಪಾಸ್ಗಳನ್ನು ಶುಕ್ರವಾರದವರೆಗೆ ನೀಡಲಾಗುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.