ADVERTISEMENT

ಡಾ. ಜ್ಯೋತಿ ನೀರಜಾಗೆ ಚಾಣಕ್ಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2019, 20:15 IST
Last Updated 7 ಮಾರ್ಚ್ 2019, 20:15 IST
ಸ್ತ್ರೀರೋಗ ತಜ್ಞೆ ಡಾ. ಜ್ಯೋತಿ ನೀರಜಾ ಸತ್ಯಾನಂದ ಅವರು ಚಾಣಕ್ಯ ವಿಶೇಷ ಜ್ಯೂರಿ ಪ್ರಶಸ್ತಿ ಪಡೆದ ಕ್ಷಣ
ಸ್ತ್ರೀರೋಗ ತಜ್ಞೆ ಡಾ. ಜ್ಯೋತಿ ನೀರಜಾ ಸತ್ಯಾನಂದ ಅವರು ಚಾಣಕ್ಯ ವಿಶೇಷ ಜ್ಯೂರಿ ಪ್ರಶಸ್ತಿ ಪಡೆದ ಕ್ಷಣ   

ನಗರದ ಪ್ರಸಿದ್ಧ ಸ್ತ್ರೀರೋಗ ತಜ್ಞೆ ಡಾ. ಜ್ಯೋತಿ ನೀರಜಾ ಸತ್ಯಾನಂದ ಅವರಿಗೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯು ಚಾಣಕ್ಯ ವಿಶೇಷ ಜ್ಯೂರಿ ಪ್ರಶಸ್ತಿ ನೀಡಿ ಗೌರವಿಸಿದೆ.

ಇತ್ತೀಚೆಗೆ ಜೈಪುರದಲ್ಲಿ ನಡೆದ ಸಮಾರಂಭದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್‌. ವೇಣುಗೋಪಾಲ್‌ ಪ್ರಶಸ್ತಿ ವಿತರಿಸಿದರು.

‘ಪೀಪಲ್ ಟ್ರೀ’ ಪ್ರತಿಷ್ಠಾನದ ಸದಸ್ಯರಾಗಿರುವ ಅವರು ಆರ್ಥಿಕವಾಗಿ ದುರ್ಬಲವಾಗಿರುವ ಸುಮಾರು 300 ರೋಗಿಗಳಿಗೆ ದುಬಾರಿ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ನಿರ್ವಹಸಿದ್ದರಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಡಾ. ಜ್ಯೋತಿ ಅವರು ಇಲ್ಲಿಯವರೆಗೂ 8,000 ಶಸ್ತ್ರಚಿಕಿತ್ಸೆಗಳನ್ನು ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.