ADVERTISEMENT

50 ವರ್ಷಗಳ ಹಿಂದೆ | ಭಾನುವಾರ, 6–9–1970

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 0:52 IST
Last Updated 6 ಸೆಪ್ಟೆಂಬರ್ 2020, 0:52 IST
   

ರಾಜಧನ ರದ್ದು ಮಸೂದೆಗೆ ರಾಜ್ಯಸಭೆಯಲ್ಲಿ ಪರಾಭವ
ನವದೆಹಲಿ, ಸೆ.5–
ರಾಜಧನ ಮತ್ತು ಮಾಜಿ ಅರಸರ ವಿಶೇಷ ಹಕ್ಕುಗಳನ್ನು ರದ್ದುಗೊಳಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆ ಇಂದು ಕೇವಲ ಒಂದು ಮತದಿಂದ ತಿರಸ್ಕರಿಸಿತು. ಮಸೂದೆಯನ್ನು ಪರಿಶೀಲನೆಗೆ ತೆಗೆದುಕೊಳ್ಳಬೇಕೆಂಬ ಅಧಿಕೃತ ಸೂಚನೆಯ ಪರವಾಗಿ 149 ಮತಗಳೂ ವಿರುದ್ಧವಾಗಿ 75 ಮತಗಳೂ ಬಂದವು.

ಹಾಜರಿದ್ದು ಮತ ನೀಡಿದ ಸದಸ್ಯರ ಪೈಕಿ ಮೂರನೇ ಎರಡರಷ್ಟು ಸದಸ್ಯರ ಬೆಂಬಲ ಗಳಿಸಲು (150) ಸಾಧ್ಯವಾಗಲಿಲ್ಲವಾದ್ದರಿಂದ ಸೂಚನೆಗೆ ಪರಾಭವವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT