ADVERTISEMENT

ದೆಹಲಿಯಲ್ಲಿ ಕಾರುಗಳು ಹೊತ್ತಿ ಉರಿದಿದ್ದವೇ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 17:42 IST
Last Updated 2 ಫೆಬ್ರುವರಿ 2021, 17:42 IST
ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ನಡೆದ ಗಲಭೆಗೂ ಈ ಚಿತ್ರಗಳಿಗೂ ಸಂಬಂಧಿವಿಲ್ಲ
ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ನಡೆದ ಗಲಭೆಗೂ ಈ ಚಿತ್ರಗಳಿಗೂ ಸಂಬಂಧಿವಿಲ್ಲ   

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವದ ದಿನ ರೈತರು ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿತ್ತು. ಆ ಸಂದರ್ಭದಲ್ಲಿ ಕಾರುಗಳಿಗೆ ಬೆಂಕಿ ಹತ್ತಿ ಉರಿಯುತ್ತಿದ್ದವು ಎಂಬ ಒಕ್ಕಣೆ ಇರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಹಲವರು ಇವುಗಳನ್ನು ಶೇರ್ ಮಾಡಿದ್ದಾರೆ.

ಗಲಭೆಯ ದಿನ ಕಾರುಗಳು ಹೊತ್ತಿ ಉರಿದಿದ್ದವೇ ಎಂಬುದನ್ನು ಪರಿಶೀಲಿಸಲು ಲಾಜಿಕಲ್ ಇಂಡಿಯನ್ಸ್ ವೆಬ್‌ಸೈಟ್ ರಿವರ್ಸ್ ಇಮೇಜ್ ಮೊರೆ ಹೋಗಿದೆ. ವೈರಲ್ ಆಗಿರುವ ಮೂರು ಚಿತ್ರಗಳೂ ಸಹ ದೆಹಲಿ ಗಲಭೆಗೆ ಸಂಬಂಧಪಟ್ಟವಲ್ಲ ಎಂಬುದು ಇದರಿಂದ ದೃಢಪಟ್ಟಿದೆ. ಈ ಚಿತ್ರಗಳು 2019ರಲ್ಲಿ ಪುಲ್ವಾಮ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧರು ಬಲಿಯಾದ ಘಟನೆಯನ್ನು ಖಂಡಿಸಿ ಜಮ್ಮು ಕಾಶ್ಮೀರ ಹಾಗೂ ಇತರೆಡೆ ನಡೆದ ಪ್ರತಿಭಟನೆಗೆ ಸಂಬಂಧಿಸಿವೆ ಎಂದು ವೆಬ್‌ಸೈಟ್ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT