ದೇಶದ ಉದ್ದಗಲಕ್ಕೂ ಕೊರೊನಾ ಸೋಂಕಿನ ಎರಡನೇ ಅಲೆ ಅಪ್ಪಳಿಸಿ ಜನರಲ್ಲಿ ಭೀತಿ ಮೂಡಿಸಿದೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಆಮ್ಲಜನಕ ಸಿಗದೆ ರೋಗಿಗಳು ಒದ್ದಾಡುತ್ತಿದ್ದಾರೆ. ಸೋಂಕು ಬರುವುದಕ್ಕಿಂತ ಮುನ್ನ ಅದನ್ನು ತಡೆಯುವುದು ಅತಿಮುಖ್ಯ. ಹೇಗೆಲ್ಲಾ ಸೋಂಕು ತಡೆಬಹುದು ಎಂಬ ಕುರಿತ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬಿಸಿನೀರಿನಲ್ಲಿ ನಿಂಬೆಯ ಹೋಳುಗಳು ಹಾಗೂ ಬೇಕಿಂಗ್ ಸೋಡಾ ಸೇರಿಸಿ ಕುಡಿಯುವುದರಿಂದ ವೈರಾಣು ಸಾಯುತ್ತದೆ ಎಂಬ ಸಂದೇಶವೊಂದು ಎಲ್ಲೆಡೆ ಹರಿದಾಡತ್ತಿದೆ.
ಈ ಸಂದೇಶದ ಸತ್ಯಾಸತ್ಯಾತೆಯನ್ನು ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ಪರಿಶೀಲಿಸಿದೆ. ಬಿಸಿನೀರಿಗೆ ನಿಂಬೆ ಹೋಳು ಹಾಗೂ ಬೇಕಿಂಗ್ ಸೋಡಾ ಸೇರಿಸಿ ಕುಡಿದರೆ ವೈರಾಣು ಸಾಯುತ್ತದೆ ಎಂಬುದು ವೈಜ್ಞಾನಿಕವಾಗಿ ದೃಢಪಟ್ಟಿಲ್ಲ. ಇದಕ್ಕೆ ಸ್ಪಷ್ಟ ಪುರಾವೆಗಳು ಲಭ್ಯವಿಲ್ಲ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.