‘ಅಸ್ಸಾಂ ಜನರ ರೋಗನಿರೋಧಕ ಶಕ್ತಿಯಿಂದಾಗಿ ಅಲ್ಲಿ ಒಂದೂ ಕೋವಿಡ್ ಪ್ರಕರಣ ದಾಖಲಾಗಿಲ್ಲ. ಇಡೀ ಭಾರತದಲ್ಲಿ ಯಾವೊಬ್ಬ ಅಸ್ಸಾಮಿ ಜನಾಂಗದ ವ್ಯಕ್ತಿಗೂ ಸೋಂಕು ತಗುಲಿಲ್ಲ. ಭಾರತದಲ್ಲಿರುವ ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಯೊಬ್ಬರು ಈ ವಿಶೇಷತೆಯ ಮೇಲೆ ಬೆಳಕು ಚೆಲ್ಲಿದ್ದಾರೆ. ಅಸ್ಸಾಮಿಗರ ರೋಗನಿರೋಧಕ ಗುಣದ ಬಗ್ಗೆ ಐಸಿಎಂಆರ್ ಅಧ್ಯಯನ ಕೈಗೊಳ್ಳಲಿದೆ’ ಎಂದು ವ್ಯಕ್ತಿಯೊಬ್ಬರು ಮಾಡಿದ್ದ ಟ್ವೀಟ್ ವೈರಲ್ ಆಗಿತ್ತು.
ಆದರೆ ಜನಾಂಗೀಯ ಗುಣದ ಕುರಿತಂತೆ ಸದ್ಯಕ್ಕೆ ಯಾವದೇ ಅಧ್ಯಯನ ಕೈಗೊಂಡಿಲ್ಲ ಎಂದು ಐಸಿಎಂಆರ್ ಡಿಜಿ ಪ್ರೊ. ಬಲರಾಮ್ ಭಾರ್ಗವ ಸ್ಪಷ್ಟಪಡಿಸಿದ್ದಾರೆ. ‘ಯಾವುದೇ ಜನಾಂಗ, ಜಾತಿ, ಧರ್ಮ, ಭಾಷೆ, ಗಡಿಗಳೆನ್ನದೆ ಎಲ್ಲರ ಮೇಲೂ ಸೋಂಕು ದಾಳಿ ಮಾಡಬಲ್ಲದು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಎಚ್ಚರಿಸಿದ್ದರು. ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಪಿಐಬಿ ಪ್ರಕಟಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.