ADVERTISEMENT

Fact check: ಶಿವಸೇನಾ–ಎನ್‌ಸಿಪಿ ಶಾಸಕರು ಹೊಡೆದಾಡಿಕೊಂಡರೇ?

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 19:45 IST
Last Updated 26 ಜೂನ್ 2022, 19:45 IST
   

ಉದ್ಘಾಟನಾ ಸಮಾರಂಭವೊಂದರಲ್ಲಿ ರಾಜಕೀಯ ನಾಯಕರ ಎರಡು ಗುಂಪು ಹೊಡೆದಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಶಿವಸೇನಾ ಮತ್ತು ಎನ್‌ಸಿಪಿ ನಾಯಕರು ಪರಸ್ಪರ ಹೊಡೆದಾಡುತ್ತಿದ್ದಾರೆ. ಎರಡೂ ಪಕ್ಷಗಳು ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿವೆ. ಎರಡೂ ಪಕ್ಷಗಳ ನಡುವೆ ಎಂದೋ ಹೊಡೆದಾಟ ನಡೆಯಬೇಕಿತ್ತು. ಈಗ ನಡೆಯುತ್ತಿದೆ ಅಷ್ಟೆ’ ಎಂಬ ವಿವರಣೆಯನ್ನು ಈ ವಿಡಿಯೊಗೆ ನೀಡಲಾಗಿದೆ. ಶಿವಸೇನಾದ ಕೆಲವು ಶಾಸಕರು ಮೈತ್ರಿಕೂಟ ತೊರೆಯುವಂತೆ ಪಕ್ಷದ ಮುಖ್ಯಸ್ಥರ ಮೇಲೆ ಬಂಡಾಯ ಎದ್ದಿರುವ ಸಂದರ್ಭದಲ್ಲಿ ಈ ವಿಡಿಯೊ ವೈರಲ್ ಆಗಿದೆ.

‘ಈ ವಿಡಿಯೊಗೂ, ಮಹಾರಾಷ್ಟ್ರ ಸರ್ಕಾರದ ಪ್ರಸ್ತುತ ಬಿಕ್ಕಟ್ಟಿಗೂ ಯಾವುದೇ ಸಂಬಂಧವಿಲ್ಲ. ಇದು 2019ರ ಮಾರ್ಚ್‌ 1ರ ವಿಡಿಯೊ. ಬೃಹನ್ ಮುಂಬೈ ನಗರ ಪಾಲಿಕೆ ನಿರ್ಮಿಸಿದ್ದ ಸಮುದಾಯ ಭವನ ಒಂದರ ಉದ್ಘಾಟನೆ ಸಮಾರಂಭದಲ್ಲಿ ದೀಪ ಬೆಳಗಿಸುವ ವಿಚಾರಕ್ಕಾಗಿ ಎನ್‌ಸಿಪಿ ಮತ್ತು ಶಿವಸೇನಾ ನಾಯಕರ ಮಧ್ಯೆ ಹೊಡೆದಾಟ ನಡೆದಿತ್ತು. 2019ರ ಮಾರ್ಚ್‌ನಲ್ಲಿ ಶಿವಸೇನಾ–ಎನ್‌ಸಿಪಿ–ಕಾಂಗ್ರೆಸ್‌ ಮೈತ್ರಿಕೂಟದ ಎಂವಿಎ ಸರ್ಕಾರ ಅಸ್ತಿತ್ವಕ್ಕೇ ಬಂದಿರಲಿಲ್ಲ. ಹಳೆಯ ವಿಡಿಯೊವನ್ನು ತಪ್ಪು ಮಾಹಿತಿಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ’ ಎಂದು ‘ದಿ ಲಾಜಿಕಲ್ ಇಂಡಿಯನ್’ ಫ್ಯಾಕ್ಟ್‌ಚೆಕ್‌ ಪ್ರಕಟಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT