ಮುಂಬೈನಿಂದ ಪಶ್ಚಿಮ ಬಂಗಾಳಕ್ಕೆ ವಲಸೆ ಕಾರ್ಮಿಕರನ್ನು ಕರೆದೊಯ್ದ ಶ್ರಮಿಕ ರೈಲು ಕಿಕ್ಕಿರಿದು ತುಂಬಿದ್ದು, ವೈಯಕ್ತಿಕ ಅಂತರ ಕಾಯ್ದುಕೊಳ್ಳುವುದು ಅಸಾಧ್ಯವಾಗಿತ್ತು. ಅಂತರ ಕಾಯ್ದುಕೊಳ್ಳಲು ತಾಕೀತು ಮಾಡುವ ಸರ್ಕಾರವೇ ಇಂತಹ ಅವ್ಯವಸ್ಥೆಗೆ ಕಾರಣವಾಗಿತ್ತು ಎಂದು ದೂರಿದ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ರೈಲು ಕಿಕ್ಕಿರಿದು ತುಂಬಿದ ವಿಡಿಯೊವೊಂದನ್ನು ಅದರೊಟ್ಟಿಗೆ ಹಂಚಿಕೊಳ್ಳಲಾಗಿದೆ.
ಮುಂಬೈನಿಂದ ಪಶ್ಚಿಮ ಬಂಗಾಳಕ್ಕೆ ವಲಸೆ ಕಾರ್ಮಿಕರನ್ನು ಹೊತ್ತೊಯ್ದ ಎಲ್ಲ ಶ್ರಮಿಕ ರೈಲುಗಳಲ್ಲೂ ಅಂತರ ಕಾಯ್ದುಕೊಳ್ಳುವ ನಿಯಮವನ್ನು ಪಾಲನೆ ಮಾಡಲಾಗಿದ್ದು, ಅಂತರ ಕಾಯ್ದುಕೊಂಡು ಎಷ್ಟು ಕಾರ್ಮಿಕರನ್ನು ಕರೆದೊಯ್ಯಲು ಸಾಧ್ಯವೋ ಅಷ್ಟೇ ಜನರನ್ನು ಪ್ರತಿ ರೈಲಿನಲ್ಲಿ ಕರೆದೊಯ್ಯಲಾಗಿದೆ. ಹೀಗಾಗಿ ಈ ಸುದ್ದಿ ಸಂಪೂರ್ಣ ಸುಳ್ಳು ಮಾಹಿತಿಯಿಂದ ಕೂಡಿದೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಿಕ್ಕಿರಿದು ತುಂಬಿದ ರೈಲಿನ ವಿಡಿಯೊ ಬಾಂಗ್ಲಾದೇಶದ್ದಾಗಿದ್ದು, 2018ರಲ್ಲಿ ಅದನ್ನು ಚಿತ್ರೀಕರಿಸಲಾಗಿದೆ ಎಂದು ಪಿಐಬಿ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.