ಏಪ್ರಿಲ್ 10ರಂದು ಸೀತಾಲ್ಕುಚಿಯಲ್ಲಿ ಸಿಐಎಸ್ಎಫ್ ಸಿಬ್ಬಂದಿ ಮೇಲೆ ಅಲ್ಲಿಯ ಜನರು ನಡೆಸಿದ ದಾಳಿಯಲ್ಲಿ ಸಿಬ್ಬಂದಿ ಒಬ್ಬರು ಗಾಯಗೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಭ್ಯರ್ಥಿ ಚಿತ್ರವೊಂದನ್ನು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಅನ್ನು ಬಿಜೆಪಿಯ ಹಲವು ನಾಯಕರು ಮರುಟ್ವೀಟ್ ಮಾಡಿದ್ದಾರೆ.
ಆದರೆ ಇದು ಸುಳ್ಳುಸುದ್ದಿ ಎಂದು ದಿ ಲಾಜಿಕಲ್ ಇಂಡಿಯ್ನ ಫ್ಯಾಕ್ಟ್ಚೆಕ್ ಪ್ರಕಟಿಸಿದೆ. ಜಾರ್ಖಂಡ್ನ ಬಗಮಾರಾದ ಗಣಿ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಸಿಐಎಸ್ಎಫ್ ಸಿಬ್ಬಂದಿ ಮೇಲೆ ಲಂಗೂರ್ ದಾಳಿ ನಡೆಸಿತ್ತು. ಅದರಲ್ಲಿ ಸಿಬ್ಬಂದಿ ಗಾಯಗೊಂಡಿದ್ದರು. ಅದೇ ಚಿತ್ರವನ್ನು ಈಗ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ ಎಂದು ಲಾಜಿಕಲ್ ಇಂಡಿಯನ್ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.