ಹೊಸವರ್ಷಕ್ಕೆಮುಂಚಿತವಾಗಿಕೇಂದ್ರ ಸರ್ಕಾರಿ ನೌಕರರಿಗೆ ಉಡುಗೊರೆ ಸಿಕ್ಕಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಶೇ 24ರಷ್ಟು ತುಟ್ಟಿಭತ್ಯೆಯನ್ನು (ಡಿ.ಎ) ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ಧಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ್ದಾರೆ. ಹಿಂದಿ ಸುದ್ದಿವಾಹಿನಿಯೊಂದರ ಸ್ಕ್ರೀನ್ಶಾಟ್ ಈ ಮಾಹಿತಿ ನೀಡುತ್ತಿದ್ದು, ಎಲ್ಲೆಡೆ ಸುದ್ದಿಯಾಗುತ್ತಿದೆ.
ಕೇಂದ್ರ ಸರ್ಕಾರವು ತುಟ್ಟಿಭತ್ಯೆಯನ್ನು ಘೋಷಿಸಿಲ್ಲ. ನಿರ್ಮಲಾ ಸೀತಾರಾಮನ್ ಅವರ ಸುದ್ದಿಗೋಷ್ಠಿಯ ಚಿತ್ರ ಬಳಸಿಕೊಂಡು,ಮಾಹಿತಿಯನ್ನು ತಿರುಚಲಾಗಿದೆ. ಸ್ಕ್ರೀನ್ಶಾಟ್ನಲ್ಲಿರುವ ಮಾಹಿತಿ ಸುಳ್ಳು ಎಂದು ಪಿಐಬಿ ಫ್ಯಾಕ್ಟ್ಚೆಕ್ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.