ಕೋವಿಡ್–19 ರೋಗಿಗಳ ಆರೈಕೆಗಾಗಿ ಕೇಂದ್ರ ಸರ್ಕಾರವು ಪ್ರತಿಯೊಬ್ಬ ರೋಗಿಗೆ ₹ 3 ಲಕ್ಷದಂತೆ ರಾಜ್ಯ ಸರ್ಕಾರಗಳಿಗೆ ಹಣ ನೀಡುತ್ತಿದೆ ಎಂಬ ಮಾಹಿತಿಯುಳ್ಳ ಧ್ವನಿ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಭಾರಿ ಸದ್ದು ಮಾಡಿದೆ.
ಕೇಂದ್ರ ಸರ್ಕಾರವು ಈ ಸಂಬಂಧ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ತಿಳಿಸಿದೆ. ಸರ್ಕಾರದ ಅಧಿಕೃತ ಟ್ವಿಟರ್ ಖಾತೆಯಾದ @mygovindia ಮೂಲಕವೂ ಈ ಸಂಬಂಧ ಸ್ಪಷ್ಟನೆ ನೀಡಲಾಗಿದೆ. ‘ಸರಿಯಾದ ಮಾಹಿತಿ ಹೊಂದಿ, ಸುರಕ್ಷಿತವಾಗಿರಿ, ಪ್ರತಿ ರೋಗಿಯ ಆರೈಕೆಗೆ ಧನಸಹಾಯ ಮಾಡುವ ಮಾಹಿತಿಯು ಶುದ್ಧ ಸುಳ್ಳು’ ಎಂದು ಟ್ವೀಟ್ನಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.