ದೆಹಲಿಯ ಜಹಾಂಗೀರ್ಪುರಿ ಹಿಂಸಾಚಾರದ ಬಳಿಕ ಎರಡು ನಿಮಿಷದ ವಿಡಿಯೊವೊಂದು ವೈರಲ್ ಆಗಿದೆ. ಕೆಲವು ಯುವಕರು ಪೊಲೀಸರ ಸಮ್ಮುಖದಲ್ಲೇ ಕಲ್ಲು ತೂರಾಟ ನಡೆಸುತ್ತಿರುವ ದೃಶ್ಯ ಇಲ್ಲಿದೆ. ಯುವಕರ ಜೊತೆಗಿದ್ದ ಕೆಲವು ಪೊಲೀಸರೂ ಕಲ್ಲುತೂರಾಟ ನಡೆಸಿದ ದೃಶ್ಯ ದಾಖಲಾಗಿದೆ. ಈ ವಿಡಿಯೊವನ್ನು ಟ್ವಿಟರ್ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೆಲವರು, ‘ನಿರ್ದಿಷ್ಟ ಸಮುದಾಯವೊಂದನ್ನು (ಮುಸ್ಲಿಂ) ಗುರಿಯಾಗಿಸಿಕೊಂಡು ಬಲಪಂಥೀಯ ಸಂಘಟನೆಯವರು ಈ ಕೃತ್ಯ ಎಸಗಿದ್ದಾರೆ’ ಎಂದು ಆರೋಪಿಸಿದ್ದಾರೆ.
ಈ ವಿಡಿಯೊವನ್ನು ಪರಿಶೀಲಿಸಿದ ದಿ ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ತಂಡ, ಜಹಾಂಗೀರ್ಪುರಿ ಹಿಂಸಾಚಾರಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. 2020ರ ಜನವರಿಯಲ್ಲಿ ಈ ವಿಡಿಯೊವನ್ನು ಚಿತ್ರೀಕರಿಸಲಾಗಿದೆ. ಉತ್ತರ ಪ್ರದೇಶ ಫಿರೋಜಾಬಾದ್ನಲ್ಲಿ ಆಗ ನಡೆಯತ್ತಿದ್ದ ಸಿಎಎ, ಎನ್ಆರ್ಸಿ ವಿರುದ್ಧದ ಪ್ರತಿಭಟನೆಯ ವೇಳೆ ಇದನ್ನು ಚಿತ್ರೀಕರಿಸಲಾಗಿದೆ. ಮುಸ್ಲಿಂ ಸಮದಾಯಕ್ಕೆ ಸೇರಿದ ಜನರ ಆಸ್ತಿಪಾಸ್ತಿಗಳಿಗೆ ಬೆಂಕಿ ಹಚ್ಚುವ ಹಾಗೂ ಅವರ ಮೇಲೆ ಕಲ್ಲು ತೂರಾಟ ನಡೆಸುವ ಈ ವಿಡಿಯೊವನ್ನು ಸ್ಥಳೀಯರು ಚಿತ್ರೀಕರಿಸಿದ್ದಾರೆ ಎಂದು ಎಂದು ವೆಬ್ಸೈಟ್ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.