ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ನ ಎರಡನೇ ಅಲೆ ಶುರುವಾಗಿದ್ದು, ಮತ್ತೆ ಆತಂಕ ಎದುರಾಗಿದೆ. ಕೊರೊನಾ ವೈರಸ್ ಹಾವಳಿಯಿಂದ ದೇಶವಾಸಿಗಳು ತೀವ್ರ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರವು ದೇಶದ ಜನರಿಗೆ ನೆರವು ಘೋಷಿಸಿದೆ. 18 ವರ್ಷ ಮೇಲ್ಪಟ್ಟ ಭಾರತದ ಪ್ರತಿ ಪ್ರಜೆಗೆ ₹1.30 ಲಕ್ಷ ಬಿಡುಗಡೆಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಈ ಕುರಿತ ಸಂದೇಶವೊಂದು ವಾಟ್ಸ್ಆ್ಯಪ್ನಲ್ಲಿ ಹರಿದಾಡುತ್ತಿದೆ. ಯಾರು ಇದಕ್ಕೆ ಅರ್ಹರು ಎಂದು ಪರಿಶೀಲಿಸಲು ಲಿಂಕ್ ಕ್ಲಿಕ್ ಮಾಡುವಂತೆ ಸೂಚಿಸಲಾಗಿದೆ.
ಕೇಂದ್ರ ಸರ್ಕಾರ ಇಂತಹ ಯಾವುದೇ ಘೋಷಣೆ ಮಾಡಿಲ್ಲ. ಇದು ದಾರಿ ತಪ್ಪಿಸುವ ಸಂದೇಶ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಘಟಕ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.