ನವದೆಹಲಿ: ಖಾಲಿ ಇರುವ ಅಂಗನವಾಡಿ ಮೇಲ್ವಿಚಾರಕರ ಹುದ್ದೆಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಬಡ್ತಿ ನೀಡಿ ಭರ್ತಿ ಮಾಡಬೇಕು ಎಂದು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸೂಚಿಸಿದೆ. ಖಾಲಿ ಇರುವ ಶೇ 50ರಷ್ಟು ಹುದ್ದೆಗಳನ್ನು ಜುಲೈ ಕೊನೆಯೊಳಗೆ ಭರ್ತಿ ಮಾಡಬೇಕು ಎಂದು ತಿಳಿಸಿದೆ.
ಕಾರ್ಯಕರ್ತೆಯರ ಬಡ್ತಿಯಿಂದ ತೆರವಾಗುವ ಸ್ಥಾನಗಳನ್ನೂ ತಕ್ಷಣವೇ ತುಂಬಬೇಕು ಎಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹೇಳಿದೆ. ಮಕ್ಕಳ ಸಮಗ್ರ ಅಭಿವೃದ್ಧಿಯ ಪರಿಷ್ಕೃತ ಯೋಜನೆಯನ್ನು (ಐಸಿಡಿಎಸ್) ಜಾರಿಗೊಳಿಸಲು ದೇಶದ ಹಿಂದುಳಿದ 115 ಜಿಲ್ಲೆಗಳನ್ನು ಗುರುತಿಸಲಾಗಿದೆ. ಇದರಲ್ಲಿ ಕರ್ನಾಟಕದ ರಾಯಚೂರು, ಯಾದಗಿರಿ ಸೇರಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.