ಮುಜಫ್ಫರ್ನಗರ, ಉತ್ತರ ಪ್ರದೇಶ: ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕವನ್ನು ಹಾನಿಗೊಳಿಸಿರುವ ಘಟನೆ ಇಲ್ಲಿನ ಬೋಪಾ ಪ್ರದೇಶದ ಜಡ್ವಾದ್ ಗ್ರಾಮದಲ್ಲಿ ನಡೆದಿದೆ. ಪಂಚಾಯಿತಿ ಕಟ್ಟಡದ ಹೊರಗಡೆ ಅಳವಡಿಸಲಾಗಿದ್ದ ನಾಮಫಲಕವನ್ನು ಕಳೆದ ರಾತ್ರಿ ಕಿಡಿಗೇಡಿಗಳು ತೆರವುಗೊಳಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಮೊಹಮದ್ ರಿಜ್ವಾನ್ ಅವರು ತಿಳಿಸಿದ್ದಾರೆ.
ಘಟನೆಯಿಂದ ರೊಚ್ಚಿಗೆದ್ದ ದಲಿತ ಸಮುದಾಯದ ಜನರು ದಲಿತ ಸೇನಾ ಸಂಘಟನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಪ್ರತಿಭಟನಾಕಾರರ ಮನವೊಲಿಸಿದ ಪೊಲೀಸರು ಸೂಕ್ತ ಕ್ರಮದ ಭರವಸೆ ನೀಡಿದರು. ಅದೇ ಸ್ಥಳದಲ್ಲಿ ನಾಮಫಲಕವನ್ನು ಪುನಃ ಅಳವಡಿಸಲಾಯಿತು. ಇತ್ತೀಚೆಗೆ ಮೀರಠ್ ಸಮೀಪದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.