ADVERTISEMENT

ಅಂಬೇಡ್ಕರ್ ಜಯಂತಿ: ಭದ್ರತೆ ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರದ ನಿರ್ದೇಶನ

ಏಜೆನ್ಸೀಸ್
Published 12 ಏಪ್ರಿಲ್ 2018, 13:24 IST
Last Updated 12 ಏಪ್ರಿಲ್ 2018, 13:24 IST
ಡಾ.ಬಿ.ಆರ್. ಅಂಬೇಡ್ಕರ್ (ಸಂಗ್ರಹ ಚಿತ್ರ)
ಡಾ.ಬಿ.ಆರ್. ಅಂಬೇಡ್ಕರ್ (ಸಂಗ್ರಹ ಚಿತ್ರ)   

ನವದೆಹಲಿ: ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ (ಏಪ್ರಿಲ್ 14) ವೇಳೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಬಗ್ಗೆ ಪರಿಶೀಲಿಸಿ ಭದ್ರತೆ ಬಿಗಿಗೊಳಿಸಿ ಎಂದು ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶಿಸಿದೆ.

‘ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಸೂಪರಿಂಟೆಂಡೆಂಟ್‌ಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಪರಿಸ್ಥಿತಿ ವೀಕ್ಷಿಸಿ, ಭದ್ರತೆಯನ್ನು ಖಾತ್ರಿಪಡಿಸಬೇಕು’ ಎಂದು ಸಚಿವಾಲಯ ಹೇಳಿದೆ.

‘ಪ್ರಾಣ ಹಾನಿ ಮತ್ತು ಆಸ್ತಿ ನಷ್ಟದ ಯಾವುದೇ ಪ್ರಕರಣ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಿ’ ಎಂದು ಸಚಿವಾಲಯ ತಿಳಿಸಿದೆ. ಕಳೆದ ಹದಿನೈದು ದಿನಗಳಲ್ಲಿ ಗೃಹ ಇಲಾಖೆ ನೀಡಿದ ಮೂರನೇ ನಿರ್ದೇಶನ ಇದಾಗಿದೆ.

ADVERTISEMENT

ಅಂಬೇಡ್ಕರ್‌ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ ಮತ್ತು ದಲಿತರ ಮೇಲೆ ಹಲ್ಲೆ ನಡೆಸಿದ ಹಲವು ಪ್ರಕರಣಗಳು ದೇಶದ ವಿವಿಧೆಡೆ ಇತ್ತೀಚೆಗೆ ನಡೆದಿವೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.