ADVERTISEMENT

ಅಂಬೇಡ್ಕರ್‌ ಪ್ರತಿಮೆ ಧ್ವಂಸ, ಬಂಧನಕ್ಕೆ ಆಗ್ರಹ

ಪಿಟಿಐ
Published 31 ಮಾರ್ಚ್ 2018, 19:30 IST
Last Updated 31 ಮಾರ್ಚ್ 2018, 19:30 IST
ಯೋಗಿ ಆದಿತ್ಯನಾಥ್‌ (ಸಂಗ್ರಹ ಚಿತ್ರ).
ಯೋಗಿ ಆದಿತ್ಯನಾಥ್‌ (ಸಂಗ್ರಹ ಚಿತ್ರ).   

ಸಿದ್ಧಾರ್ಥನಗರ (ಉತ್ತರ ಪ್ರದೇಶ): ಇಲ್ಲಿನ ಗೋಹನಿಯಾ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು, ಇದನ್ನು ಖಂಡಿಸಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

‘ಪ್ರತಿಮೆಯ ಜಾಗದಲ್ಲಿ ಬೇರೆ ಪ್ರತಿಮೆ ಸ್ಥಾಪಿಸಲಾಗಿದೆ. ಅಪರಿಚಿತರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಅವರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಧರಮ್‌ವೀರ್‌ ತಿಳಿಸಿದ್ದಾರೆ.

ಪ್ರತಿಮೆಗಳ ಭದ್ರತೆಗೆ ಸಿಎಂ ಆದೇಶ: ಪ್ರತಿಮೆಗಳ ಭದ್ರತೆ ಕುರಿತಂತೆ ಸೂಕ್ತ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಶಾಂತಿ ಮತ್ತು ಸೌಹಾರ್ದತೆ ಕದಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.