ನವದೆಹಲಿ: ಅಖಿಲ ಭಾರತ ಆಯುರ್ವೇದ ಸಂಸ್ಥೆಯನ್ನು (ಎಐಐಎ) ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಉದ್ಘಾಟನೆ ಮಾಡಿದರೇ? ಸಂಸ್ಥೆ ಈಗಾಗಲೇ ಅಸ್ತಿತ್ವದಲ್ಲಿತ್ತೇ ಎಂಬ ಪ್ರಶ್ನೆಗಳು ಈಗ ಹುಟ್ಟಿಕೊಂಡಿವೆ.
ಎಐಐಎಯನ್ನು ಮಂಗಳವಾರ ಉದ್ಘಾಟಿಸಿದ್ದ ಮೋದಿ ಅವರು, ಪರೋಕ್ಷವಾಗಿ ಹಿಂದಿನ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ‘ತನ್ನ ಇತಿಹಾಸ ಮತ್ತು ಪರಂಪರೆಯನ್ನು ಗೌರವಿಸದಿದ್ದರೆ ಯಾವುದೇ ದೇಶವೂ ಮುಂದುವರಿಯಲು ಸಾಧ್ಯವಿಲ್ಲ. ಬ್ರಿಟಿಷರ ಕಾಲದಲ್ಲಿ ಆಯುರ್ವೇದವನ್ನು ಕಡೆಗಣಿಸಲಾಗಿತ್ತು. ಸ್ವಾತಂತ್ರ್ಯ ಬಂದ ನಂತರವೂ ಆಯುರ್ವೇದವನ್ನು ಕಡೆಗಣಿಸಲಾಯಿತು. ಆದರೆ ನಾವು ಅದಕ್ಕೆ ಆದ್ಯತೆ ನೀಡುತ್ತಿದ್ದೇವೆ. ಸಾರ್ವಜನಿಕ ಆರೋಗ್ಯ ಸೇವೆಯ ಜತೆಗೆ ಆಯುರ್ವೇದವನ್ನು ವಿಲೀನ ಮಾಡುತ್ತೇವೆ’ ಎಂದು ಹೇಳಿದ್ದರು.
ಅಲ್ಲದೆ, ದೇಶದ ಮೊದಲ ಆಯುರ್ವೇದ ಸಂಸ್ಥೆಯನ್ನು ದೇಶಕ್ಕೆ ಸಮರ್ಪಿಸುತ್ತಿರುವುದಾಗಿ ಪ್ರಧಾನಮಂತ್ರಿಯವರ ಕಚೇರಿಯ ಟ್ವಿಟರ್ ಖಾತೆಯಲ್ಲಿ ಸಂದೇಶ ಪ್ರಕಟಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.