ADVERTISEMENT

ಅಣ್ಣಾ ಹಜಾರೆ ಅಮರಣಾಂತ ಉಪವಾಸ ಅಂತ್ಯ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2011, 5:40 IST
Last Updated 9 ಏಪ್ರಿಲ್ 2011, 5:40 IST

ನವದೆಹಲಿ (ಐಎಎನ್ಎಸ್): ಇಲ್ಲಿನ ಜಂತರ್ ಮಂತರ್ ನಲ್ಲಿ ಕಳೆದ 96 ಗಂಟೆಗಳಿಂದ ಭ್ರಷ್ಟಾಚಾರದ ವಿರುದ್ಧ ಅಮರಣಾಂತ ಉಪವಾಸ ಕೈಗೊಂಡಿದ್ದ ಗಾಂಧಿವಾದಿ ಅಣ್ಣಾ ಹಜಾರೆ ಅವರು ಶನಿವಾರ ಬೆಳಿಗ್ಗೆ ತಮ್ಮ ನಿರಶನ ಅಂತ್ಯಗೊಳಿಸಿದರು.

ಬರುವ ಮುಂಗಾರು ಅಧಿವೇಶನದಲ್ಲಿ ಸಂಸತ್ತಿನಲ್ಲಿ ಭ್ರಷ್ಟಾಚಾರದ ವಿರುದ್ಧ ಇನ್ನಷ್ಟು  ಪರಿಣಾಮಕಾರಿಯಾಗಿರುವ ಮಸೂದೆ ರಚಸಿ ಮಂಡಿಸಲಾಗುವುದು ಎಂದು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ನೀಡಿದ ಭರವಸೆಯ ಮೇರೆಗೆ ಅಣ್ಣಾ ಹಜಾರೆ ಅವರು ತಮ್ಮ  ನಿರಶನವನ್ನು ಕೊನೆಗೊಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT