ADVERTISEMENT

ಅತ್ಯಾಚಾರ: ಒಡಿಶಾ ಸಚಿವ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2012, 19:30 IST
Last Updated 19 ಜನವರಿ 2012, 19:30 IST
ಅತ್ಯಾಚಾರ: ಒಡಿಶಾ ಸಚಿವ ರಾಜೀನಾಮೆ
ಅತ್ಯಾಚಾರ: ಒಡಿಶಾ ಸಚಿವ ರಾಜೀನಾಮೆ   

ಭುವನೇಶ್ವರ (ಪಿಟಿಐ): ಒಡಿಶಾದ ಪಿಪ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ರಕ್ಷಿಸಿದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಒಡಿಶಾದ ಕೃಷಿ ಸಚಿವ ಪ್ರದೀಪ್ ಮಹಾರಥಿ ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ವ್ಯಾಪಕ ಟೀಕೆಗೆ ಒಳಗಾಗಿದ್ದ ಮಹಾರಥಿ, ನೈತಿಕತೆಯ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ತಿಂಗಳು ಪಂಚಾಯತ್ ಚುನಾವಣೆ ನಡೆಯುವುದರಿಂದ ಆಡಳಿತಾರೂಢ ಬಿಜೆಡಿ ಮುಖ ಉಳಿಸಿಕೊಳ್ಳಲು ಈ ಕ್ರಮ ಜರುಗಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.