ಜೈಪುರ: ‘ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ್ದ ಭಾಷಣಗಳನ್ನು ಒಳಗೊಂಡ ಪುಸ್ತಕವನ್ನು ರಾಜಸ್ಥಾನದ ಐಎಎಸ್ ಅಧಿಕಾರಿಗಳಿಗೆ ಅಧ್ಯಯನಕ್ಕೆಂದು ವಿತರಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.
‘ಚಿಂತನ್ ಶಿಬಿರ್’ ಎಂಬ ಪುಸ್ತಕದ ಪ್ರತಿಗಳನ್ನು ಗುಜರಾತ್ ಸರ್ಕಾರವು ರಾಜಸ್ಥಾನ ಸರ್ಕಾರಕ್ಕೆ ಕಳುಹಿಸಿದೆ. ಅವನ್ನು ಅಧಿಕಾರಿಗಳಿಗೆ ವಿತರಿಸುವುದಕ್ಕೆ ಸಂಬಂಧಿಸಿದ ಕಡತವು ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿದೆ. ಅನುಮತಿ ದೊರೆತ ನಂತರ ಪುಸ್ತಕಗಳನ್ನು ವಿತರಿಸಲಾಗುತ್ತದೆ’ ಎಂದು ರಾಜಸ್ಥಾನದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.