ADVERTISEMENT

ಅನುರಾಗ್‌ ತಿವಾರಿ ಸಾವು ಪ್ರಕರಣ: ಎಸ್‌ಐಟಿಯಿಂದ ಬೆಂಗಳೂರಿನಲ್ಲಿ ದಾಖಲೆ ಪರಿಶೀಲನೆ

ಏಜೆನ್ಸೀಸ್
Published 1 ಜೂನ್ 2017, 11:26 IST
Last Updated 1 ಜೂನ್ 2017, 11:26 IST
ಅನುರಾಗ್‌ ತಿವಾರಿ
ಅನುರಾಗ್‌ ತಿವಾರಿ   

ಬೆಂಗಳೂರು: ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಗುರುವಾರ ಬೆಂಗಳೂರಿನ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಆಯುಕ್ತರ ಕಚೇರಿಗೆ ಭೇಟಿ ನೀಡಿದ್ದಾರೆ.

‘ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ₹ 2,000 ಕೋಟಿ ಹಗರಣವನ್ನು ಬಯಲಿಗೆಳೆಯಲು ಮುಂದಾದುದೇ ಅನುರಾಗ್‌ ಸಾವಿಗೆ ಕಾರಣ’ ಎಂದು ಅವರ ಸಹೋದರ ಮಯಾಂಕ್‌ ತಿವಾರಿ ಆರೋಪಿಸಿದ್ದರು.

ಹೀಗಾಗಿ ಎಸ್‌ಐಟಿ ಅಧಿಕಾರಿಗಳು ರಾಜ್ಯದ ಆಯುಕ್ತರ ಕಚೇರಿಯ ಸಿಬ್ಬಂದಿಯನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಕಚೇರಿಗೆ ಭೇಟಿ ನೀಡಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದ ಅನುರಾಗ್‌ ಅವರು ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಆಯುಕ್ತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.