ADVERTISEMENT

ಅಫ್ಜಲ್‌ಗುರು ಕ್ಷಮಾದಾನಕ್ಕೆ : ಕಾಶ್ಮೀರ ಶಾಸಕನ ಬೆಂಬಲ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2011, 9:35 IST
Last Updated 3 ಸೆಪ್ಟೆಂಬರ್ 2011, 9:35 IST

ಶ್ರೀನಗರ(ಪಿಟಿಐ): ಸಂಸತ್ತಿನ ಮೇಲೆ ದಾಳಿ ಮಾಡಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಅಫ್ಜಲ್‌ಗುರುವಿಗೆ ಕ್ಷಮಾದಾನ ನೀಡುವ ಕುರಿತು ಕಾಶ್ಮೀರ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳ ಬೇಕು ಹಾಗೂ ಈ ನಿರ್ಣಯಕ್ಕೆ ಕೇಂದ್ರ ಸರ್ಕಾರ ಯಾವುದೇ ರೀತಿ ವ್ಯತಿರಿಕ್ತವಾಗಿ ಪ್ರತಿಕ್ರಿಯಿಸಬಾರದೆಂದು  ಪಕ್ಷೇತರ ಶಾಸಕ ಅಬ್ದುಲ್‌ರಶೀದ್‌ ಶನಿವಾರ ವರದಿಗಾರರಿಗೆ ತಿಳಿಸಿದ್ದಾರೆ.

ಕ್ಷಮದಾನ ನಿರ್ಧಾರದ ಕುರಿತು ಕೇಳಿರುವ ಅರ್ಜಿಯನ್ನು  ವಿಧಾನಸಭೆ ಕಾರ್ಯಾಲಯಕ್ಕೆ ಶುಕ್ರವಾರ ಸಲ್ಲಿಸಲಾಗಿದೆ. ಈ ಅರ್ಜಿಯ ಬಗ್ಗೆ ಆಡಳಿತ  ಪಕ್ಷ ನ್ಯಾಷನಲ್ ಕಾನ್ಫರೆನ್ಸ್ ಅಥವಾ ವಿರೋಧ ಪಕ್ಷವಾದ ಪಿಡಿಪಿ ತೆಗೆದುಕೊಳ್ಳುವ ನಿರ್ಧಾರವನ್ನು ಎದುರು ನೋಡುತ್ತಿರುವುದಾಗಿ ಅವರು ಹೇಳಿದ್ದಾರೆ.

ರಾಜೀವ್ ಹತ್ಯೆಯ ಹಂತಕರಿಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತ ಕ್ಷಮದಾನ ನೀಡುವ  ಅರ್ಜಿ ಸಲ್ಲಿಸಿರುವುದು ಮತ್ತು ಪಂಜಾಬ್‌ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ದೇವಿಂದ್ರ ಪಾಲ್‌ಸಿಂಗ್ ಇವರ ಕ್ಷಮದಾನದ ಅರ್ಜಿಯನ್ನು ಪ್ರಧಾನ ಮಂತ್ರಿಗಳಿಗೆ ಕಳುಹಿಸಿರುವುದಾದರೇ ನಮ್ಮ ಮುಖ್ಯ ಮಂತ್ರಿ ಒಮರ್ ಅಬ್ದುಲ ಅವರು ಅಫ್ಜಲ್‌ಗುರು ವಿಷಯದಲ್ಲಿ ಏಕೆ  ತಮ್ಮ ಟ್ವಿಟರ್‌ನಲ್ಲಿ ಕೋಲಾಹಲಕ್ಕೆ ಒಳಗಾಗಬೇಕು? ಎಂದು ರಶೀದ್ ಪ್ರಶ್ನಿಸಿದ್ದಾರೆ.

 ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಒಮರ್ ಸೂಕ್ತ ನಿರ್ಣಯ ತೆಗೆದುಕೊಳ್ಳುವರು ಹಾಗೂ ಇದಕ್ಕೆ ಪ್ರಮುಖ ಪಕ್ಷಗಳು ಬೆಂಬಲವನ್ನು ವ್ಯಕ್ತಪಡಿಸುವ ವಿಶ್ವಾಸ ಇದೆ ಎಂದು ಅವರು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.