ADVERTISEMENT

ಅಮರನಾಥ ಗುಹೆ ಪ್ರದೇಶ ‘ನಿಶ್ಯಬ್ದ ವಲಯ’ ಅಲ್ಲ: ಎನ್‌ಜಿಟಿ

ಪಿಟಿಐ
Published 14 ಡಿಸೆಂಬರ್ 2017, 19:30 IST
Last Updated 14 ಡಿಸೆಂಬರ್ 2017, 19:30 IST
ಅಮರನಾಥ ಗುಹೆ ಪ್ರದೇಶ ‘ನಿಶ್ಯಬ್ದ ವಲಯ’ ಅಲ್ಲ: ಎನ್‌ಜಿಟಿ
ಅಮರನಾಥ ಗುಹೆ ಪ್ರದೇಶ ‘ನಿಶ್ಯಬ್ದ ವಲಯ’ ಅಲ್ಲ: ಎನ್‌ಜಿಟಿ   

ನವದೆಹಲಿ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹಾ ದೇವಾಲಯದಲ್ಲಿ ಮಂತ್ರಘೋಷ, ಭಜನೆ ಮಾಡಲು ನಿರ್ಬಂಧ ವಿಧಿಸಿಲ್ಲ ಎಂದು ರಾಷ್ಟ್ರೀಯ ಹಸಿರು ನ್ಯಾಯಪೀಠ (ಎನ್‌ಜಿಟಿ) ಸ್ಪಷ್ಟಪಡಿಸಿದೆ.

ಗುಹಾ ದೇವಾಲಯದ ಇಡೀ ಪ್ರದೇಶವನ್ನು ‘ನಿಶ್ಯಬ್ದ ವಲಯ’ ಎಂದು ಘೋಷಿಸುವ ಉದ್ದೇಶ ಹೊಂದಿಲ್ಲ. ಅಲ್ಲದೇ ಅಂತಹ ಘೋಷಣೆಯನ್ನೂ ಮಾಡಿಲ್ಲ ಎಂದು ಎನ್‌ಜಿಟಿ ಸ್ಪಷ್ಟಪಡಿಸಿದೆ.

ಯಾವುದೇ ವ್ಯಕ್ತಿಗಳು ಅಥವಾ ಭಕ್ತರು, ಶಿವಲಿಂಗದ ಮುಂಭಾಗದಲ್ಲಿ ನಿಶ್ಯಬ್ದ ಕಾಪಾಡಬೇಕು ಎಂಬ ನಿರ್ಬಂಧವನ್ನು ಮಾತ್ರ ವಿಧಿಸಲಾಗಿದೆ. ಇದನ್ನು ಹೊರತುಪಡಿಸಿದರೆ ದೇವಾಲಯದ ಮೆಟ್ಟಿಲುಗಳೂ ಸೇರಿದಂತೆ ಯಾವುದೇ ಭಾಗಕ್ಕೆ ಸಂಬಂಧಿಸಿದಂತೆ ನಿರ್ಬಂಧ ವಿಧಿಸಿಲ್ಲ ಎಂದು ಅದು ಗುರುವಾರ ತಿಳಿಸಿದೆ.

ADVERTISEMENT

ಪವಿತ್ರ ಗುಹಾ ದೇವಾಲಯದ ಬಳಿಯ 30 ಮೆಟ್ಟಿಲುಗಳ ಆಚೆಗೆ ಯಾರೂ ಏನನ್ನೂ ಕೊಂಡೊಯ್ಯಬಾರದು. ಅದು ಸದ್ಯ ಜಾರಿಯಲ್ಲಿರುವ ದೇವಾಲಯ ಮಂಡಳಿಯ ಈ ಹಿಂದಿನ ನಿಯಮವೇ ಆಗಿದೆ. ಮೆಟ್ಟಿಲುಗಳ ಕೆಳ ಭಾಗಕ್ಕೆ ಸಂಬಂಧಿಸಿದಂತೆ ಯಾವ ನಿರ್ಬಂಧವನ್ನೂ ವಿಧಿಸಿಲ್ಲ ಎಂದು ಅದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.