ADVERTISEMENT

ಅಮರ್ ಸಿಂಗ್ ಜಾಮೀನು ಅರ್ಜಿ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 19:30 IST
Last Updated 12 ಅಕ್ಟೋಬರ್ 2011, 19:30 IST

ನವದೆಹಲಿ, (ಐಎಎನ್‌ಎಸ್): ವೋಟಿಗಾಗಿ ನೋಟು ಹಗರಣದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ರಾಜ್ಯಸಭಾ ಸದಸ್ಯ ಮುಖಂಡ ಅಮರ್ ಸಿಂಗ್ ಅವರ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈ ಕೋರ್ಟ್ ಅ.18ಕ್ಕೆ ಮುಂದೂಡಿದೆ. ಸಿಂಗ್ ಆರೋಗ್ಯ ಸ್ಥಿತಿ ಕುರಿತಂತೆ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಲ್ಲಿಸಿರುವ ವರದಿ ಅಂಗೀಕರಿಸಿದ ನ್ಯಾಯಾಲಯ, ಅದರ ಪರಿಶೀಲನೆಗೆ ಸಮಯದ ಅಗತ್ಯವಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.