ADVERTISEMENT

ಅಮಾನತು ಹಿಂದಕ್ಕೆ ಸಂಭವ

‘ವಿಷಾದ ವ್ಯಕ್ತಪಡಿಸಿದ’ ದುರ್ಗಾಶಕ್ತಿ ನಾಗಪಾಲ್‌

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2013, 19:59 IST
Last Updated 21 ಸೆಪ್ಟೆಂಬರ್ 2013, 19:59 IST

ಲಖನೌ: ನಿರ್ಮಾಣ ಹಂತದಲ್ಲಿದ್ದ ಮಸೀದಿ ತಡೆಗೋಡೆ ಕೆಡವಿದ ಆರೋಪದ ಮೇಲೆ ಅಮಾನತುಗೊಂಡಿದ್ದ ಐಎಎಸ್‌ ಅಧಿಕಾರಿ ದುಗಾರ್ಶಕ್ತಿ ನಾಗಪಾಲ್‌ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಬಳಿ ವಿಷಾದ ವ್ಯಕ್ತಪಡಿಸಿದ್ದು, ಸರ್ಕಾರ ಅವರ ಅಮಾನತು ಹಿಂದಕ್ಕೆ ಪಡೆಯುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ, ದುರ್ಗಾಶಕ್ತಿ ನಾಗಪಾಲ್‌ ಅವರು ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರನ್ನು ಭೇಟಿ ಮಾಡಿ, ಅಮಾನತು ಆದೇಶವನ್ನು   ಹಿಂಪಡೆಯಬೇಕೆಂದು ಮನವಿ ಮಾಡಿದ್ದಾರೆ. ಅಲ್ಲದೇ, ಮಸೀದಿ ಗೋಡೆಯನ್ನು ಬೀಳಿಸಿದ ಪ್ರಕರಣದ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಅವರ ಪತಿ ಐಎಎಸ್‌ ಅಧಿಕಾರಿ ಅಭಿಷೇಕ್‌ ಸಿಂಗ್‌ ಕೂಡ ಜೊತೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.