ಚೆನ್ನೈ(ಪಿಟಿಐ): ರಾಜೀವ್ ಹತ್ಯೆ ಪ್ರಕರಣದ ಆರೋಪಿಗಳ ಗಲ್ಲುಶಿಕ್ಷೆಯನ್ನು ಜೀವಾ ವಧಿಗೆ ಪರಿವರ್ತಿಸಿ ಸುಪ್ರೀಂಕೋರ್ಟ್ ತೀರ್ಪುಗೆ ಪ್ರತಿಕ್ರಿಯಿಸಿವ ಆರೋಪಿ ಎ.ಜಿ.ಪೇರ್ಅರಿವಲನ್ ತಾಯಿ ಪುತ್ರನ ಬಿಡುಗಡೆಯಾಗಲಿದ್ದಾನೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ತೀರ್ಪು ಕುರಿತು ಪ್ರತಿಕ್ರಿಯಿಸಿರುವ ಪೇರ್ಅರಿವಲನ್ ತಾಯಿ ಅರ್ಪುತಮ್ ಅಮ್ಮಾಳ್, ಇಂತಹ ತೀರ್ಪು ನೀಡಿದ್ದಕ್ಕಾಗಿ ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಈ ತೀರ್ಪಿಗಾಗಿ ನಾನು ಕಳೆದ 23 ವರ್ಷಗಳಿಂದ ಕಾಯುತ್ತಿದ್ದೆ. ಇದೇ ಆಶಾವಾದದಿಂದ ನಾನು ಬದುಕುತ್ತಿದ್ದೇನೆ. ಈಗ ನನ್ನ ಮನಸ್ಸಿಗೆ ಶಾಂತಿ ದೊರೆತಿದೆ’ ಎಂದು ಹೇಳಿದ್ದಾರೆ.
‘ನನ್ನ ಮಗ ಏನು ತಪ್ಪು ಮಾಡ ದಿದ್ದರೂ ಕಳೆದ 23 ವರ್ಷಗಳಿಂದ ಜೈಲಿನಲ್ಲಿದ್ದಾನೆ. ಆತ ಮಾಡದ ತಪ್ಪಿಗಾಗಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಆತನನ್ನು ಬಿಡುಗಡೆ ಮಾಡಬೇಕು. ಜೈಲಿನಿಂದ ಬಿಡುಗಡೆಯಾಗುವ ವಿಶ್ವಾಸದಲ್ಲಿದ್ದೇನೆ’ ಎಂದರು. ಇದೇ ಸಂದರ್ಭದಲ್ಲಿ ರಾಜೀವ್ ಗಾಂಧಿ ಹಂತಕರ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಬೇಕೆಂದು ಒತ್ತಾಯಿಸಿ ಹೋರಾಟ ನಡೆ ಸಿದವರಿಗೆ ಧನ್ಯವಾದ ಸಮರ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.