ಶಬರಿಮಲೆ (ಪಿಟಿಐ): ಮಂಡಲಪೂಜೆ ಉತ್ಸವದ ಅಂಗವಾಗಿ ಸಾವಿರಾರು ಭಕ್ತರು ಬುಧವಾರ ಶಬರಿಮಲೆಯಲ್ಲಿ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಎರಡು ತಿಂಗಳ ಕಾಲ ನಡೆಯುವ ಶಬರಿಮಲೆ ಯಾತ್ರೆಯಲ್ಲಿ ಮೊದಲ ಹಂತವಾಗಿ ಮಂಡಲ ಪೂಜೆ ನಡೆಸಲಾಗುತ್ತದೆ.
ಬಂಗಾರದ ಉಡುಪು ತೊಡಿಸಿದ್ದ ಅಯ್ಯಪ್ಪ ಸ್ವಾಮಿಗೆ ಮಧ್ಯಾಹ್ನ ಗಂಧದ ಪೂಜೆ ನೆರವೇರಿಸಲಾಯಿತು. ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದ ಕಾರಣ ನೂಕು ನುಗ್ಗಲು ಉಂಟಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.