ADVERTISEMENT

ಅವಧಿಗೂ ಮೊದಲು ದತ್‌ ಬಿಡುಗಡೆ: ಸರ್ಕಾರದ ಸಮರ್ಥನೆ

ಪಿಟಿಐ
Published 17 ಜುಲೈ 2017, 19:30 IST
Last Updated 17 ಜುಲೈ 2017, 19:30 IST
ಸಂಜಯ್‌ ದತ್‌
ಸಂಜಯ್‌ ದತ್‌   

ಮುಂಬೈ: 1993ರ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ನಟ ಸಂಜಯ್‌ದತ್‌ ಅವರನ್ನು ಅವಧಿಗಿಂತ 8 ತಿಂಗಳು ಮೊದಲೇ ಜೈಲಿನಿಂದ ಬಿಡುಗಡೆ ಮಾಡಿದ್ದಕ್ಕೆ ಮಹಾರಾಷ್ಟ್ರ ಸರ್ಕಾರ  ಸೋಮವಾರ ಸಮರ್ಥನೆ ನೀಡಿದೆ.

ನಿಯಮದ ಪ್ರಕಾರವೇ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಅವರನ್ನು ವಿಶೇಷವಾಗಿ ಪರಿಗಣಿಸಿಲ್ಲ  ಎಂದು ಬಾಂಬೆ ಹೈಕೋರ್ಟ್‌ಗೆ ಸರ್ಕಾರ ತಿಳಿಸಿದೆ. ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರ ಇರಿಸಿಕೊಂಡಿದ್ದಕ್ಕಾಗಿ ದತ್‌್ ಅವರಿಗೆ ಈ ಮೊದಲು ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. 

ವಿಚಾರಣೆ ವೇಳೆ ಜಾಮೀನಿನಲ್ಲಿದ್ದ ದತ್‌, 2013ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್‌್ ಶಿಕ್ಷೆ ಎತ್ತಿಹಿಡಿದ ಬಳಿಕ ನ್ಯಾಯಾಲಯಕ್ಕೆ ಶರಣಾಗಿದ್ದರು.
ಪುಣೆಯ ಯೆರವಾಡಾ ಜೈಲಿನಲ್ಲಿದ್ದ ದತ್‌ ಅವರನ್ನು ಸನ್ನಡತೆ ಆಧಾರದ ಮೇಲೆ, ಶಿಕ್ಷೆ ಅವಧಿ ಪೂರ್ಣಗೊಳ್ಳುವ ಮೊದಲೇ 2016ರ ಫೆಬ್ರುವರಿಯಲ್ಲಿ ಬಿಡುಗಡೆ ಮಾಡಲಾಗಿತ್ತು.

ADVERTISEMENT

‘ದೈಹಿಕ ತರಬೇತಿ, ಶೈಕ್ಷಣಿಕ ಕಾರ್ಯಕ್ರಮಗಳು ಸೇರಿದಂತೆ ಹಲವು ಚಟುವಟಿಕೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಹಾಗೂ ಸನ್ನಡತೆ, ಶಿಸ್ತಿನ ವರ್ತನೆಯಿಂದಾಗಿ’ ದತ್‌್ ಅವರನ್ನು ಅವಧಿಗೆ ಮೊದಲೇ ಬಿಡುಗಡೆ ಮಾಡಲಾಯಿತು ಎಂದು ನ್ಯಾಯಮೂರ್ತಿಗಳಾದ ಆರ್‌.ಎಂ. ಸಾವಂತ್‌್ ಹಾಗೂ ಸಾಧನ ಜಾಧವ್ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಸಲ್ಲಿಸಿದ ವರದಿಯಲ್ಲಿ ಸರ್ಕಾರ ಉಲ್ಲೇಖಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.