ನವದೆಹಲಿ (ಪಿಟಿಐ): ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡುವುದು ಬರ್ಬರ ಕೃತ್ಯವಾಗುತ್ತದೆ ಎಂು ಕಾನೂನು ಸಚಿವಾಲಯ ಶುಕ್ರವಾರ ಕಪ್ಪುಹಣದ ತನಿಖೆಗೆ ಸಂಬಂಧಿಸಿದಂತೆ ಸರ್ಕಾರ ನೇಮಿಸಿರುವ ಸಮಿತಿಗೆ ತಿಳಿಸಿದೆ.
ಇಂಥ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಗಲ್ಲು ಅಥವಾ ಜೀವಾವಧಿ ಶಿಕ್ಷೆ ನೀಡಲು ಸಾಧ್ಯವಿಲ್ಲ ಎಂದು ಸಚಿವಾಲಯ ಹೇಳಿದೆ. ಅವ್ಯವಹಾರ ಪ್ರಕರಣಗಳ ತನಿಖೆಗೆ ಹೊಸ ಕಾನೂನು ಬೇಕಾಗಿಲ್ಲ. ಆಡಳಿತಾತ್ಮಕ ಕಾರ್ಯತಂತ್ರ ಬಲಪಡಿಸಬೇಕಾಗಿದೆ ಎಂದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.