ಪುಣೆ (ಪಿಟಿಐ): ಜನರೊಂದಿಗೆ ಸೌಹಾರ್ದದಿಂದ ನಡೆದುಕೊಳ್ಳಬೇಕು ಎಂದು ತಮ್ಮ ಕಾರ್ಯಕರ್ತರಿಗೆ ಸ್ಪಷ್ಟವಾಗಿ ಹೇಳಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಅವರು, ಅಶಿಸ್ತಿನ ವರ್ತನೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಇಲ್ಲಿನ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ಯೊಬ್ಬ ಕಾರ್ಯಕರ್ತನೂ ಜನರ ಜೊತೆ ಒಡನಾಟ ಇಟ್ಟುಕೊಂಡು, ಪಕ್ಷದ ಕಾರ್ಯಕ್ರಮಗಳನ್ನು ಜಾರಿಗೆ ತರುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ಅಗತ್ಯಬಿದ್ದಾಗ ಪಕ್ಷದ ಪದಾಧಿಕಾರಿಗಳನ್ನು ಬದಲಾಯಿಸುವುದು ಅನಿವಾರ್ಯ. ಕೇವಲ ಮತ ಗಳಿಕೆ ಉದ್ದೇಶವಾಗಬಾರದು. ಚುನಾವಣೆಯನ್ನು ಗಣನೆಯಲ್ಲಿ ಇಟ್ಟುಕೊಳ್ಳದೇ ಕೆಲಸ ಮಾಡಿದರೆ ಜನರು ತಾವಾಗಿಯೇ ಮತ ನೀಡುತ್ತಾರೆ ಎಂದು ಠಾಕ್ರೆ ಕಿವಿಮಾತು ಹೇಳಿದರು.
ಹುಟ್ಟುಹಬ್ಬ ಮತ್ತಿತ್ತರ ಸಂದರ್ಭದಲ್ಲಿ ನಗರದಾದ್ಯಂತ ಬ್ಯಾನರ್ ಹಾಗೂ ಕಟೌಟ್ಗಳನ್ನು ಹಾಕಿಕೊಳ್ಳುವವರನ್ನು ಪಕ್ಷದಿಂದ ಹೊರ ಹಾಕಲಾಗುವುದು ಎಂದೂ ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.