ವಿಶಾಖಪಟ್ಟಣ: ಆಸ್ಪತ್ರೆಗೆ ತೆರಳಲು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ಗರ್ಭಿಣಿಯೊಬ್ಬರನ್ನು ಗ್ರಾಮಸ್ಥರು 6 ಕಿ.ಮೀ ದೂರ ಹೊತ್ತೊಯ್ದ ಘಟನೆ ಇಲ್ಲಿನ ‘ಅನುಕು’ ಗ್ರಾಮದಲ್ಲಿ ನಡೆದಿದೆ.
ಸರಿಯಾದ ರಸ್ತೆ ಸಂಪರ್ಕ ಇಲ್ಲದ ಕಾರಣಕ್ಕೆ ಆಂಬ್ಯುಲೆನ್ಸ್ ಗ್ರಾಮಕ್ಕೆ ಬಂದಿಲ್ಲ. ಹಾಗಾಗಿ ಗ್ರಾಮಸ್ಥರ ಸಹಾಯದಿಂದ ಬಿದಿರಿನ ತುಂಡುಗಳಿಗೆ ಮೇಲುಹೊದಿಕೆ ಬಳಸಿ ಗರ್ಭಿಣಿಯನ್ನು ಆಸ್ಪತ್ರೆಗೆ ಹೊತ್ತುಕೊಂಡು ಹೋಗಲು ನಿರ್ಧರಿಸಿದರು ಎಂದು ವರದಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.