ADVERTISEMENT

ಆಣ್ಣಾ, ಬಿಜೆಪಿಯಿಂದ ಗೊಂದಲ ಸೃಷ್ಟಿ

​ಪ್ರಜಾವಾಣಿ ವಾರ್ತೆ
Published 3 ಜನವರಿ 2012, 19:30 IST
Last Updated 3 ಜನವರಿ 2012, 19:30 IST

ಕೋಲ್ಕತ್ತ (ಐಎಎನ್‌ಎಸ್): ಲೋಕಪಾಲ ಮಸೂದೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಮತ್ತು ಅಣ್ಣಾ ಹಜಾರೆ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕೇಂದ್ರ ಕಂಪೆನಿ ವ್ಯವಹಾರ ಸಚಿವ ವೀರಪ್ಪ ಮೊಯಿಲಿ ಆರೋಪಿಸಿದ್ದಾರೆ.

`ಲೋಕಪಾಲ ಮಸೂದೆಗೆ ಸಂಬಂಧಿಸಿದಂತೆ ಎಷ್ಟು ಕಾಲ ಚರ್ಚೆ ನಡೆಯಲಿದೆ ಎಂದು ನನಗೆ ಗೊತ್ತಿಲ್ಲ. 1966ರಿಂದಲೇ ಈ ಕುರಿತು ಸಾರ್ವಜನಿಕ ಚರ್ಚೆ ಆರಂಭವಾಗಿತ್ತು. ಸ್ವಾತಂತ್ರ್ಯ ದೊರೆತು ಸಾಕಷ್ಟು ವರ್ಷಗಳು ಕಳೆದಿದ್ದರೂ ಈಗಲೂ ಚರ್ಚೆ ನಡೆಯುತ್ತಿದೆ~ ಎಂದು ಮೊಯಿಲಿ ವರದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.