ಚೆನ್ನೈ: ಹರಿಯಾಣ ಮೂಲದ ಸಿಆರ್ಪಿಎಫ್ ಕಾನ್ಸ್ಟೇಬಲ್ವೊಬ್ಬರು ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ರಾಜೇಶ್ ಕುಮಾರ್ ಎಂದು ಗುರುತಿಸಲಾಗಿದೆ.
ಬೆಳಿಗ್ಗೆ ಸಿಆರ್ಪಿಎಫ್ ಶಿಬಿರದಲ್ಲಿ ಗುಂಡಿನ ಸದ್ದು ಕೇಳಿತು. ಅಲ್ಲಿಗೆ ಹೋಗುವಷ್ಟರಲ್ಲಿ ರಾಜೇಶ್ ಮೃತಪಟ್ಟಿದ್ದರು ಎಂದು ಸಹ್ಯೋದ್ಯೋಗಿ ತಿಳಿಸಿದ್ದಾರೆ.
ಕಾನ್ಸ್ಟೇಬಲ್ ಅವರ ಸಾವಿನ ಬಗ್ಗೆ ಎಲ್ಲಾ ದಿಕ್ಕುಗಳಿಂದಲೂ ಕುಲಂಕಷವಾಗಿ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.