ಮುಂಬೈ (ಪಿಟಿಐ): ಇಲ್ಲಿನ ಆದರ್ಶ ವಸತಿ ಸಹಕಾರ ಸಂಘದ ಹಗರಣದಲ್ಲಿ ಕೇಂದ್ರ ಗೃಹ ಸಚಿವ ಸುಶೀಲ್ಕುಮಾರ್ ಶಿಂಧೆ ಅವರ ಪಾತ್ರ ಇಲ್ಲ ಎಂದು ಸಿಬಿಐ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದೆ.
ಶಿಂಧೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದಾಗ ಈ ಹಗರಣದ ಸಂಬಂಧ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಯಾವ ಸಾಕ್ಷಿ– ಆಧಾರಗಳೂ ಇಲ್ಲ ಎಂದು ತನಿಖಾ ಸಂಸ್ಥೆಯು ಬಾಂಬೆ ಹೈಕೋರ್ಟ್ಗೆ ತಿಳಿಸಿದೆ.
ದಕ್ಷಿಣ ಮುಂಬೈನಲ್ಲಿರುವ 31 ಅಂತಸ್ತುಗಳ ವಿಲಾಸಿ ‘ಆದರ್ಶ ವಸತಿ ಸಂಕೀರ್ಣ’ದಲ್ಲಿ ಶಿಂಧೆ ಬೇನಾಮಿ ಫ್ಲ್ಯಾಟ್ಗಳನ್ನು ಹೊಂದಿರುವುದರಿಂದ ಅವರನ್ನೂ ಹಗರಣದಲ್ಲಿ ಆರೋಪಿಯೆಂದು ಪರಿಗಣಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ವಾಟೆಗಾಂವ್ಕರ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇದಕ್ಕೆ ಪ್ರತಿಕ್ರಿಯೆಯಾಗಿ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಹೀಗೆ ಹೇಳಿದೆ.
ಹಗರಣಕ್ಕೆ ಸಂಬಂಧಿಸಿದಂತೆ ತಾನು ನಡೆಸುತ್ತಿರುವ ತನಿಖೆಯಲ್ಲಿ ಶಿಂಧೆ ಅವರನ್ನು ಆರೋಪಿಯಾಗಿ ಪರಿಗಣಿಸುವ ಅಗತ್ಯವಿದೆ ಎಂದು ತೋರುತ್ತಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.