ನವದೆಹಲಿ: ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಲಿಂಕ್ ಮಾಡಲು ನಿಗದಿಪಡಿಸಲಾಗಿದ್ದ ಗಡುವನ್ನು 2018ರ ಮಾರ್ಚ್ 31ಕ್ಕೆ ವಿಸ್ತರಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ತಿಳಿಸಿದೆ.
‘ಆಧಾರ್ ಲಿಂಕ್ ಮಾಡುವ ಗಡುವನ್ನು 2018ರ ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠಕ್ಕೆ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಬುಧವಾರ ತಿಳಿಸಿದರು.
ಡಿಸೆಂಬರ್ ಒಳಗಾಗಿ ಆಧಾರ್ ಲಿಂಕ್ ಮಾಡುವಂತೆ ಈ ಹಿಂದೆ ಗಡುವು ವಿಧಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.