ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ (ಎಎಪಿ) ಜತೆ ಮೈತ್ರಿಯ ಸಾಧ್ಯತೆಯನ್ನು ಕಾಂಗ್ರೆಸ್ ಶನಿವಾರ ತಳ್ಳಿ ಹಾಕಿದೆ.
ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್–ಎಎಪಿ ಸ್ಥಾನ ಹೊಂದಾಣಿಕೆ ಬಗ್ಗೆ ಬಹಿರಂಗ ಚರ್ಚೆ ಆರಂಭವಾದ ಮರುದಿನವೇ ಈ ಹೇಳಿಕೆ ಹೊರಬಿದ್ದಿದೆ.
‘ಎಎಪಿ ಜತೆ ಮೈತ್ರಿಗೆ ಕಾಂಗ್ರೆಸ್ನ ನಾಯಕರು ಮತ್ತು ಕಾರ್ಯಕರ್ತರಿಗೆ ಮನಸ್ಸಿಲ್ಲ’ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಾಕನ್ ಶನಿವಾರ ಸ್ಪಷ್ಟಪಡಿಸಿದ್ದಾರೆ.
‘ಕೇಜ್ರಿವಾಲ್ ಸರ್ಕಾರದ ಜನಪ್ರಿಯತೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಕಾಂಗ್ರೆಸ್ ಹೆಚ್ಚು ಜನಪ್ರಿಯವಾಗುತ್ತಿದೆ.ಇಂತಹ ಸಂದರ್ಭದಲ್ಲಿ ಆಪ್ ಜತೆ ಯಾರು ತಾನೆ ಮೈತ್ರಿ ಮಾಡಿಕೊಳ್ಳಲು ಮುಂದೆ ಬರುತ್ತಾರೆ’ ಎಂದು ಅವರು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.