ನವದೆಹಲಿ (ಪಿಟಿಐ): ‘ಆಮ್ ಆದ್ಮಿ’ ಪಕ್ಷಕ್ಕೆ (ಎಎಪಿ) ನವದೆಹಲಿಯಲ್ಲಿ ಸರ್ಕಾರ ರಚಿಸಲು ಇನ್ನು ಕೆಲವು ದಿನಗಳ ಕಾಲಾವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹಸಚಿವ ಸುಶೀಲ್ಕುಮಾರ್ ಶಿಂಧೆ ಹೇಳಿದ್ದಾರೆ. ಅತಂತ್ರ ವಿಧಾನಸಭೆಯಿಂದಾಗಿ ನವದೆಹಲಿಯಲ್ಲಿ ರಾಜಕೀಯ ಅನಿಶ್ಚಿತತೆ ತಲೆದೋರಿದೆ.
ಸರ್ಕಾರ ರಚನೆಗೆ ಎಎಪಿ ಎಷ್ಟು ದಿನಗಳ ಅವಕಾಶ ಕೋರಿದೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರನ್ನು ಕೇಳಲಾಗಿದೆ ಎಂದು ಶಿಂಧೆ ಅವರು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.