ಮುಂಬೈ (ಪಿಟಿಐ): ದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರ ವಶದಲ್ಲಿರುವ ಸೈಯದ್ ಜಬೀಯುದ್ದೀನ್ ಅನ್ಸಾರಿ ಅಲಿಯಾಸ್ ಜುಂದಾಲ್ನನ್ನು ದೆಹಲಿ ತೀಸ್ ಹಜಾರಿ ಕೋರ್ಟ್ ಮುಂದೆ ಗುರುವಾರ ಹಾಜರುಪಡಿಸುವಂತೆ ಸ್ಥಳೀಯ ನ್ಯಾಯಾಲಯ ನಿರ್ದೇಶನ ನೀಡಿದೆ.
ವಿಚಾರಣೆಗಾಗಿ ಜುಂದಾಲ್ನನ್ನು ತನ್ನ ವಶಕ್ಕೆ ಒಪ್ಪಿಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಅರ್ಜಿ ಸಲ್ಲಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.