ನವದೆಹಲಿ (ಪಿಟಿಐ): ಜ.30ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮಾನವ ಹಕ್ಕುಗಳ ಹೋರಾಟಗಾರ್ತಿ ಇರೋಮ್ ಶರ್ಮಿಳಾ ಅವರಿಗೆ ದೆಹಲಿ ಕೋರ್ಟ್ ಶುಕ್ರವಾರ ವಾರಂಟ್ ಹೊರಡಿಸಿದೆ. 2006ರಲ್ಲಿ ಆಮರಣಾಂತ ಉಪವಾಸದ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಮೇಲೆ ಶರ್ಮಿಳಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ಅಕ್ಟೋಬರ್ 30ರಂದು ಕೋರ್ಟ್ಗೆ ಹಾಜರಾಗುವಂತೆ ಅವರಿಗೆ ಸೂಚಿಲಾಗಿತ್ತು. ಆದರೆ ಶರ್ಮಿಳಾ ಕೋರ್ಟ್ಗೆ ಬಂದಿರಲಿಲ್ಲ.
ಮಣಿಪುರದಲ್ಲಿ ಜಾರಿಯಲ್ಲಿರುವ ವಿವಾದಿತ ಸಶಸ್ತ್ರಪಡೆ ವಿಶೇಷಾಧಿಕಾರ ಕಾಯ್ದೆ (ಎಎಫ್ಎಸ್ಪಿಎ) ರದ್ದುಮಾಡಬೇಕೆಂದು ಆಗ್ರಹಿಸಿ ಕಳೆದ 12ಕ್ಕೂ ಹೆಚ್ಚು ವರ್ಷಗಳಿಂದ ಶರ್ಮಿಳಾ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.