ಬೆಂಗಳೂರು: ಶುಕ್ರ ಗ್ರಹದ ವೈಜ್ಞಾನಿಕ ಅಧ್ಯಯನಕ್ಕೆ ಬಾಹ್ಯಾಕಾಶ ನೌಕೆ ಕಳುಹಿಸುವ ‘ಶುಕ್ರ ಯಾನ’ ಯೋಜನೆಯನ್ನು ಇಸ್ರೋ ಅಧಿಕೃತವಾಗಿ ಪ್ರಕಟಿಸಿದೆ.
ದೇಶದ ವಿವಿಧ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಶುಕ್ರ ಯೋಜನೆಯಲ್ಲಿ ತೊಡಗಿಸಿಕೊಳ್ಳಲು ಇಸ್ರೋ ಕರೆ ನೀಡಿದೆ.
ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಇಸ್ರೋ ನಿರ್ದೇಶಕ ದೇವಿಪ್ರಸಾದ್ ಕಾರ್ಣಿಕ್, ‘ಶುಕ್ರ ಯೋಜನೆ ಕುರಿತ ಅಧಿಕೃತ ಘೋಷಣೆ ಇದಾಗಿದೆ. ವೈಜ್ಞಾನಿಕ ಅಧ್ಯಯನಕ್ಕೆ ಅಗತ್ಯವಿರುವ ಪೇಲೋಡ್ಗಳನ್ನು ವಿಜ್ಞಾನ ಸಂಸ್ಥೆಗಳು ಅಭಿವೃದ್ಧಿಪಡಿಸಬೇಕಾಗಿದೆ’ ಎಂದರು.
ಈ ಯೋಜನೆ ಕಾರ್ಯಗತಗೊಳಿಸಲು ಕೆಲವು ವರ್ಷಗಳೇ ಬೇಕಾಗುತ್ತದೆ. ಒಂದೆರಡು ವರ್ಷಗಳಲ್ಲಿ ಆಗುವ ಕೆಲಸವಲ್ಲ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.