
ಪ್ರಜಾವಾಣಿ ವಾರ್ತೆಶಿಲ್ಲಾಂಗ್ (ಪಿಟಿಐ): ಈಶಾನ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಪುನಃ ಗುರುವಾರ ರಾತ್ರಿ 7.48ರಲ್ಲಿ ಲಘು ಭೂಕಂಪನ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 4.8ರಷ್ಟಿತ್ತು. ಕಂಪನವು ಮ್ಯಾನ್ಮಾರ್ನಲ್ಲಿ ಕೇಂದ್ರೀಕೃತವಾಗಿತ್ತು.
ಸಿಕ್ಕಿಂ, ಮೇಘಾಲಯ, ಮಣಿಪುರ, ತ್ರಿಪುರಾ, ಮಿಜೋರಾಂ ಮತ್ತಿತರ ಕಡೆ ಭೂಮಿ ನಡುಗಿದೆ. ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಐದು ದಿನಗಳ ಹಿಂದಷ್ಟೇ ಈ ಭಾಗದಲ್ಲಿ ಭಾರಿ ಭೂಕಂಪನವಾಗಿದ್ದನ್ನು ಸ್ಮರಿಸಬಹುದು.
ಗ್ಯಾಂಗ್ಟಕ್ (ಸಿಕ್ಕಿಂ) ವರದಿ: ಗುರುವಾರ ರಾತ್ರಿ 10.15ರ ಸಮಯದಲ್ಲಿ ಇಲ್ಲಿ ಪುನಃ ಲಘು ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 3.9ರ ತೀವ್ರತೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮತ್ತೆ ಭೂಮಿ ಕಂಪಿಸಿದ್ದರಿಂದ ಆತಂಕಗೊಂಡ ಜನರು ತಮ್ಮ ತಮ್ಮ ಮನೆಗಳಿಂದ ಹೊರಗೆ ಬಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.