ಜಮ್ಮು: ‘ಕಠುವಾ ಜಿಲ್ಲೆಗೆ ಹೊಂದಿಕೊಂಡಿರುವ ಅಂತರರಾಷ್ಟ್ರೀಯ ಗಡಿಭಾಗದಲ್ಲಿ ಶಂಕಿತ ಉಗ್ರರು ಒಳನುಸುಳಿರುವ ಶಂಕೆ ಇದ್ದು ಜಮ್ಮು ಭಾಗದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೇ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅದಕ್ಕೂ ಮುನ್ನ ಈ ಬೆಳವಣಿಗೆ ನಡೆದಿದೆ.
‘ಲೊಂಧಿ ಬೊಬ್ಬಿಯನ್ನ ತರ್ನಾ ಅಲ್ಲಾ ಪ್ರದೇಶದಲ್ಲಿ ಮೂವರಿಂದ ನಾಲ್ವರು ಉಗ್ರರ ಚಲನವಲನ ಕಂಡುಬಂದ ಬಳಿಕ ಈ ಭಾಗದಲ್ಲಿ ಭಾನುವಾರ ಮಧ್ಯರಾತ್ರಿ 12ರಿಂದಲೇ ಕಟ್ಟೆಚ್ಚರ ಘೋಷಿಸಲಾಗಿದೆ. ಕಠುವಾ, ಸಾಂಬಾ, ಜಮ್ಮು ಜಿಲ್ಲೆಗಳಲ್ಲಿ ಹಾದುಹೋಗುವ ಹೆದ್ದಾರಿಗಳಲ್ಲಿ ಭದ್ರತಾ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದ್ದು, ಹುಡುಕಾಟ ಮುಂದುವರಿದಿದೆ’ ಎಂದು ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.