ADVERTISEMENT

ಉಗ್ರರ ದಾಳಿ: ಬಿಜೆಪಿ ಮುಖಂಡ ಪಾರು

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2018, 19:30 IST
Last Updated 15 ಮಾರ್ಚ್ 2018, 19:30 IST

ಶ್ರೀನಗರ: ಇಲ್ಲಿನ ಹೊರವಲಯದ ಬಲ್ಹಾಮದಲ್ಲಿ ಬಿಜೆಪಿ ಮುಖಂಡ ಮೊಹಮ್ಮದ್‌ ಅನ್ವರ್‌ ಖಾನ್‌  ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಅವರು ಪಾರಾಗಿದ್ದಾರೆ. ಆದರೆ ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

‘ಅನ್ವರ್‌ ಅವರು ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿಯ ಜೊತೆಗಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿ ರೈಫಲ್‌ ಕಸಿಯಲು ಯತ್ನಿಸಿದ್ದಾರೆ. ಸಿಬ್ಬಂದಿ ಪ್ರತಿದಾಳಿ ನಡೆಸಿದಾಗ ಪರಾರಿಯಾಗಿದ್ದಾರೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭದ್ರತಾ ಪಡೆಗಳು ಸ್ಥಳಕ್ಕೆ ತೆರಳಿ ಉಗ್ರರ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.